ಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್

ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹತಾಶರಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಹಿಂದೂಗಳ ವಿರೋಧಿ ಹೇಳಿಕೆ ನೀಡುವವರ ತಲೆ ಕತ್ತರಿಸಬೇಕು ಎಂದು ಸೋಮವಾರ ದಾವಣಗೆರೆಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಹತ್ತು ತಿಂಗಳಲ್ಲಿ ಅಲ್ಪಸಂಖ್ಯಾತರ ಶಿಕ್ಷಣ, ಹಜ್ ಯಾತ್ರೆ, ಮುಂತಾದ ಅಭಿವೃದ್ಧಿಗೆ ಹೆಚ್ಚಿನ ಹಣ ತೊಡಗಿಸಲಾಗಿದೆ. ಹೀಗಿರುವಾಗ ಹಿಂದೂಗಳ ವಿರೋಧಿ ಹೇಳಿಕೆ ನೀಡುವವರ ತಲೆ ಕತ್ತರಿಸಬೇಕು ಎಂದರು. ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎನ್ನಲಾಗಿದೆ.
ರೇಣುಕಾಚಾರ್ಯ ಹೇಳಿಕೆಗೆ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ್ದೇನೆ. ಮಂಗಳವಾರ ವರದಿ ನನ್ನ ಕೈಸೇರಲಿದೆ. ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಚುನಾವಣಾಧಿಕಾರಿ ಎಂ ಎನ್ ವಿದ್ಯಾಶಂಕರ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು












Click it and Unblock the Notifications