ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್

By Staff
|
Google Oneindia Kannada News

Renukacharya
ಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ.

ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹತಾಶರಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಹಿಂದೂಗಳ ವಿರೋಧಿ ಹೇಳಿಕೆ ನೀಡುವವರ ತಲೆ ಕತ್ತರಿಸಬೇಕು ಎಂದು ಸೋಮವಾರ ದಾವಣಗೆರೆಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಹತ್ತು ತಿಂಗಳಲ್ಲಿ ಅಲ್ಪಸಂಖ್ಯಾತರ ಶಿಕ್ಷಣ, ಹಜ್ ಯಾತ್ರೆ, ಮುಂತಾದ ಅಭಿವೃದ್ಧಿಗೆ ಹೆಚ್ಚಿನ ಹಣ ತೊಡಗಿಸಲಾಗಿದೆ. ಹೀಗಿರುವಾಗ ಹಿಂದೂಗಳ ವಿರೋಧಿ ಹೇಳಿಕೆ ನೀಡುವವರ ತಲೆ ಕತ್ತರಿಸಬೇಕು ಎಂದರು. ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎನ್ನಲಾಗಿದೆ.

ರೇಣುಕಾಚಾರ್ಯ ಹೇಳಿಕೆಗೆ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ್ದೇನೆ. ಮಂಗಳವಾರ ವರದಿ ನನ್ನ ಕೈಸೇರಲಿದೆ. ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಚುನಾವಣಾಧಿಕಾರಿ ಎಂ ಎನ್ ವಿದ್ಯಾಶಂಕರ್ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X