ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?

By Staff
|
Google Oneindia Kannada News

BK Shivaram likely join to JD(S)
ಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು ನಿರ್ಧರಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಭಾನುವಾರ ಬೆಳಗ್ಗೆ ಶಿವರಾಂ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಮೀರ್ ಅಹ್ಮದ್, ತಮ್ಮ ಪಕ್ಷಕ್ಕೆ ಸೇರುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಪ್ರತಿಕ್ರಿಯಿಸಿದ ಶಿವರಾಂ, ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನನ್ನ ಸಹೋದರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರಬಹುದು. ಆದರೆ, ರಾಜಕಾರಣದಲ್ಲಿ ಇಬ್ಬರೂ ಸ್ವತಂತ್ರರಾಗಿದ್ದೇವೆ. ನನ್ನ ನಿರ್ಧಾರದಿಂದ ಅವರಿಗೆ ತೊಂದರೆ ಆಗದು ಎಂದು ಶಿವರಾಂ ಅಭಿಪ್ರಾಯಪಟ್ಟರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X