ಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?

ಭಾನುವಾರ ಬೆಳಗ್ಗೆ ಶಿವರಾಂ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಮೀರ್ ಅಹ್ಮದ್, ತಮ್ಮ ಪಕ್ಷಕ್ಕೆ ಸೇರುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಪ್ರತಿಕ್ರಿಯಿಸಿದ ಶಿವರಾಂ, ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನನ್ನ ಸಹೋದರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರಬಹುದು. ಆದರೆ, ರಾಜಕಾರಣದಲ್ಲಿ ಇಬ್ಬರೂ ಸ್ವತಂತ್ರರಾಗಿದ್ದೇವೆ. ನನ್ನ ನಿರ್ಧಾರದಿಂದ ಅವರಿಗೆ ತೊಂದರೆ ಆಗದು ಎಂದು ಶಿವರಾಂ ಅಭಿಪ್ರಾಯಪಟ್ಟರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications