ಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್

Ananth kumar
ಬಿಜಾಪುರ, ಏ. 6 : ಬೆಂಗಳೂರು ದಕ್ಷಿಣ ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದ್ದು, ವಿಜಯಮಾಲೆ ಕಟ್ಟಿಟ್ಟ ಬುತ್ತಿ. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಆರಂಭವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಎಚ್ ಎನ್ ಆನಂತಕುಮಾರ್ ಹೇಳಿದರು.

ಪಕ್ಷದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ ಪರ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿರುವ ಅವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಬೆಂಗಳೂರು ದಕ್ಷಿಣದಲ್ಲಿ ತಮ್ಮ ಗೆಲುವು ನಿಶ್ಚಿತ. ಅಲ್ಲದೇ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಕನಿಷ್ಠ 20 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸದಿಂದ ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣ ಆರಂಭವಾಗಿದ್ದು, ಬಿಜೆಪಿ ತತ್ವ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟ ಅನ್ಯ ಪಕ್ಷಗಳ ಅನೇಕ ನಾಯಕರು ಪಕ್ಷ ಸೇರುತ್ತಿದ್ದಾರೆ ಎಂದ ಅನಂತಕುಮಾರ್, ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಆರಂಭವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ರಾಜ್ಯದಲ್ಲಿ ಅನೇಕ ನಾಯಕರು ಪಕ್ಷ ತೊರೆದಿದ್ದಾರೆ. ಯುಪಿಎ ಅಂಗಪಕ್ಷಗಳು ಯಪಿಎದಿಂದ ದೂರ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಚರಮಗೀತೆಯನ್ನು ಬರೆಯಲಿದ್ದಾರೆ ಎಂದು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+