ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಬಂಧನ
ಮೈಸೂರು, ಏ. 6 : ಇತ್ತೀಚೆಗೆ ಕೋಮುಗಲಭೆಯಿಂದ ತಲ್ಲಣಿಸಿದ್ದ ಕ್ಯಾತಮಾರನಹಳ್ಳಿ ಭೇಟಿ ನೀಡಲು ತೆರಳುತ್ತಿದ್ದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಅವರನ್ನು ಬಂಧಿಸಲಾಗಿದೆ.
ಇತ್ತೀಚೆಗೆ ಕ್ಯಾತಮಾರನಹಳ್ಳಿಯಲ್ಲಿ ಎರಡು ಕೋಮಿನ ನಡುವೆ ಗಲಭೆ ಉಂಟಾಗಿತ್ತು. ದೇವಸ್ಥಾನಗಳ ಮೇಲೆ ದಾಳಿ ಸಹ ನಡೆದಿತ್ತು. ಇದರಿಂದ ಈ ಪ್ರದೇಶದಲ್ಲಿ ಉಂಟಾಗಿದ್ದ ತ್ವೇಷಮಯ ಇನ್ನೂ ವಾತಾವರಣ ಆರಿಲ್ಲ. ಬೂದಿ ಮುಚ್ಚಿದ ಕೆಂಡದಂತಿರುವ ಪ್ರದೇಶಕ್ಕೆ ಮುತಾಲಿಕ್ ಭೇಟಿ ನೀಡಿದರೆ ಇನ್ನಷ್ಟು ಅವಘಡ ಸಂಭವಿಸಬಹುದು ಎಂದು ಪೊಲೀಸರು ಮುಂಜಾಗ್ರತಾ ಕ್ರಮ ಅವರನ್ನು ಬಂಧಿಸಿದ್ದಾರೆ. ಅಲ್ಲದೇ ಕ್ಯಾತಮಾರನಹಳ್ಳಿಯಲ್ಲಿ ಇಂದೂ ಕೂಡಾ 144 ಕಲಂ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಮ್ಮ ಬಂಧನಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪ್ರಮೋದ್ ಮುತಾಲಿಕ್, ಘಟನಾ ಸ್ಥಳದಲ್ಲಿ ಕಲಂ 144 ಜಾರಿಯಲ್ಲಿದೆ ಎಂದು ತಿಳಿಸಿದ್ದರೆ ಅಲ್ಲಿಗೆ ತೆರಲುವ ಕಾರ್ಯಕ್ರಮ ಹಾಕಿಕೊಳ್ಳುತ್ತಿರಲಿಲ್ಲ. ಅಲ್ಲದೇ, ಭೇಟಿಗೆ ಸಂಬಂಧಿಸಿಂದಂತೆ ಮುಂಚಿತವಾಗಿ ಮೈಸೂರು ಪೊಲೀಸರಿಗೆ ತಿಳಿಸಿದ್ದೆ. ಇಷ್ಟಾದರೂ ಕೂಡಾ ನನ್ನನ್ನು ಏಕಾಏಕಿ ಬಂಧಿಸಿರುವ ಕ್ರಮ ಸಂವಿಧಾನ ವಿರೋಧಿ ಕೆಲಸ ಎಂದು ಕಿಡಿಕಾರಿದ್ದಾರೆ.
ಗಲಭೆಯಿಂದ ನೊಂದಿರುವ ಹಿಂದೂ ಕುಟುಂಬಗಳಿಗೆ ಸಾಂತ್ವನ ಹೇಳಲು ಅಲ್ಲಿಗೆ ತೆರಳುತ್ತಿರುವುದಾಗಿ ಹೇಳಿದ, ಅವರು, ಭಾರತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಿದ್ದರೆ ಹೇಗೆ, ಇಷ್ಟೆಲ್ಲಾ ಅನ್ಯಾಯ ನಡೆದಿದೆ, ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ದೇವಾಲಯಗಳ ದಾಳಿ ಆಗಿವೆ. ಇಷ್ಟಾದರೂ ಗಲಭೆ ಪೀಡಿತರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಿಂದೂ ಪರ ಸಂಘಟನೆ ಮುಖ್ಯಸ್ಥನಾದ ನಾನು ಹಿಂದೂಗಳಲ್ಲಿ ಸೂಕ್ತ ರಕ್ಷಣೆ ನೀಡುವುದರ ಜೊತೆಗೆ ವಿಶ್ವಾಸ ತುಂಬಲು ಅಲ್ಲಿಗೆ ತೆರಳುತ್ತಿದ್ದಾಗ ಪೊಲೀಸರು ಬಂಧಿಸಿರುವುದು ಸಂಪೂರ್ಣ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಕ್ಯಾತಮಾರನಹಳ್ಳಿಯಲ್ಲಿ ನಿಷೇಧಾಜ್ಞೆ ಜಾರಿ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications