ಮೇ. 20 ರಿಂದ ಪ್ರಥಮ ಪಿಯುಸಿ ಪೂರಕ ಪರೀಕ್ಷೆ
ಕೊಪ್ಪಳ ಏ. 7: ಪ್ರಥಮ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಹಿಂದಿನ ಪರೀಕ್ಷೆಗಳಲ್ಲಿ ಪ್ರಥಮ ಪಿ.ಯು.ಸಿ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ. 20 ರಿಂದ 30 ರವರೆಗೆ ಸಪ್ಲಿಮೆಂಟರಿ ಪರೀಕ್ಷೆಯನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಪ್ರಥಮ ಪಿ.ಯು.ಸಿ. ಸಪ್ಲಿಮೆಂಟರಿ ಪರೀಕ್ಷೆಯ ವೇಳಾಪಟ್ಟಿ ವಿವರ ಇಂತಿದೆ.
*ಮೇ. 20 ರಂದು ಬೆಳಿಗ್ಗೆ ಇಂಗ್ಲೀಷ್ ಹಾಗೂ ಮಧ್ಯಾಹ್ನ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ,
*ಮೇ.21 ರಂದು ಬೆಳಿಗ್ಗೆ ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಮತ್ತು ಫ್ರೆಂಚ್ ಹಾಗೂ ಅದೇ ದಿನ ಮಧ್ಯಾಹ್ನ ಅರೇಬಿಕ್ ವಿಷಯಗಳ ಪರೀಕ್ಷೆ
*ಮೇ. 22 ರಂದು ಇತಿಹಾಸ, ಎಲೆಕ್ಟ್ರಾನಿಕ್ಸ್ ಮತ್ತು ಗಣಕ ವಿಜ್ಞಾನ;
*ಮೇ 23 ರಂದು ಅರ್ಥಶಾಸ್ತ್ರ ಮತ್ತು ಭೂಗರ್ಭಶಾಸ್ತ್ರ;
*25 ರಂದು ರಾಜ್ಯಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರ ;
*ಮೇ 26 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಮತ್ತು ಭೌತಶಾಸ್ತ್ರ ;
*ಮೇ 27 ರಂದು ಬಿಸಿನೆಸ್ ಸ್ಟಡೀಸ್, ರಸಾಯನಶಾಸ್ತ್ರ ಮತ್ತು ಶಿಕ್ಷಣ, ಅದೇ ದಿನ ಮಧ್ಯಾಹ್ನ ಮನ:ಶಾಸ್ತ್ರ ;
28 ರಂದು ಭೂಗೋಳಶಾಸ್ತ್ರ ಮತ್ತು ಗಣಿತ, ಅದೇ ದಿನ ಮಧ್ಯಾಹ್ನ ತರ್ಕಶಾಸ್ತ್ರ, ಗೃಹವಿಜ್ಞಾನ ಮತ್ತು ಬೇಸಿಕ್ ಮ್ಯಾಥ್ಸ್ ;
*29 ರಂದು ಸಮಾಜಶಾಸ್ತ್ರ ಮತ್ತು ಜೀವಶಾಸ್ತ್ರ
*ಮೇ. 30 ರಂದು ಹಿಂದಿ ಮತ್ತು ಸಂಸ್ಕೃತ, ಅದೇ ದಿನ ಮಧ್ಯಾಹ್ನ ಉರ್ದು ವಿಷಯದ ಪರೀಕ್ಷೆ ನಿಗದಿಪಡಿಸಲಾಗಿದೆ.
ಬೆಳಗಿನ ಪರೀಕ್ಷೆ ಬೆಳಿಗ್ಗೆ 9.30 ರಿಂದ 12.45 ಗಂಟೆಯವರೆಗೆ ಮತ್ತು ಮಧ್ಯಾಹ್ನದ ಪರೀಕ್ಷೆ ಮಧ್ಯಾಹ್ನ 2 ರಿಂದ 5.15 ರವರೆಗೆ ನಡೆಯಲಿದೆ.
ಕೊಪ್ಪಳ ಜಿಲ್ಲೆಯ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕದ ವಿವರ ಹಾಗೂ ಪಾವತಿಗಾಗಿ ಸಂಬಂಧಿಸಿದ ಕಾಲೇಜುಗಳಿಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ. ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 25 ಕೊನೆಯ ದಿನಾಂಕವಾಗಿರುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡವಾರ್ತೆ)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications