ಕಾಮೆಡ್ ಕೆ, ಕಾನೂನು ಪ್ರವೇಶ ಪರೀಕ್ಷೆ ಏಕಕಾಲದಲ್ಲಿ
ಬೆಂಗಳೂರು, ಏ. 8 : ಕಾಮೆಡ್ ಕೆ ಹಾಗೂ ಕಾನೂನು ಪದವಿ ಪ್ರವೇಶ ಪರೀಕ್ಷೆಗಳು ಏಕಕಾಲದಲ್ಲಿ ನಡೆಸುವ ವೇಳಾಪಟ್ಟಿ ಪ್ರಕಟವಾಗಿದ್ದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಇದು ವಿದ್ಯಾರ್ಥಿಗಳ ಪೋಷಕರ ತೀವ್ರ ಅಸಮಾಧಾನಕ್ಕೂ ಕಾರಣವಾಗಿದೆ.
ಈ ಹಿಂದೆ ಕಾಮೆಡ್ ಮತ್ತು ಕಾನೂನು ಪದವಿ ಪ್ರವೇಶ ಪರೀಕ್ಷೆ ಬೇರೆ ಬೇರೆ ದಿನದಂದು ನಡೆಯುತ್ತಿತ್ತು. ಇಂಜಿನಿಯರಿಂಗ್ ನಲ್ಲಿ ತಮಗೆ ಬೇಕಿರುವ ಪದವಿ ಪ್ರವೇಶ ದೊರೆಯದ ಹಿನ್ನೆಲೆಯಲ್ಲಿ ಆಸಕ್ತ ವಿದ್ಯಾರ್ಥಿಗಳು ಕಾನೂನು ಪ್ರವೇಶ ಪರೀಕ್ಷೆ ಕುಳಿತುಕೊಳ್ಳುತ್ತಿದ್ದರು. ಆದರೆ, ಈ ಸಲ ಅಂತಹ ಅವಕಾಶದಿಂದ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ. ಏಪ್ರಿಲ್ 17 ರಂದು ಎರಡು ಪರೀಕ್ಷೆಗಳು ಏಕಕಾಲದಲ್ಲಿ ನಡೆಯುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ಪೋಷಕರಿಗೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಗೆ ಶುರುವಾಗಿದ್ದು, ಪರೀಕ್ಷೆಗೆ ಕುಳಿತುಕೊಳ್ಳುವ ಮೊದಲು ತಾನು ಯಾವ ಪದವಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು ಎನ್ನುವುದನ್ನು ಮೊದಲೇ ನಿರ್ಧರಿಸಿ ಪರೀಕ್ಷೆ ಬರೆಯುವುದು ಲೇಸು ಎನ್ನುವಂತಾಗಿದೆ. ಪ್ರವೇಶ ಪರೀಕ್ಷೆಗಳು ಭಾನುವಾರ ನಡೆಸುವುದು ವಾಡಿಕೆ. ಆದರೆ, ಲೋಕಸಭೆ ಚುನಾವಣೆಗಳ ಎಲ್ಲ ಪ್ರಕ್ರಿಯೆಗಳು ಏಪ್ರಿಲ್ 16 ರಂದು ಕೊನೆಗೊಳ್ಳಲಿವೆ. ಇದರಿಂದ ಏಪ್ರಿಲ್ 17 ರಂದು ಪರೀಕ್ಷೆ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಕಾಮೆಡ್ ಮೂಲಗಳು ತಿಳಿಸಿವೆ. ರಾಜ್ಯದ 168 ಕೇಂದ್ರಗಳಲ್ಲಿ ಕಾಮೆಡ್ ಕೆ ಪರೀಕ್ಷೆಗಳು ನಡೆಯಲಿವೆ. 17 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕಾಮೆಡ್ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications