ಕಾಮೆಡ್ ಕೆ, ಕಾನೂನು ಪ್ರವೇಶ ಪರೀಕ್ಷೆ ಏಕಕಾಲದಲ್ಲಿ
ಬೆಂಗಳೂರು, ಏ. 8 : ಕಾಮೆಡ್ ಕೆ ಹಾಗೂ ಕಾನೂನು ಪದವಿ ಪ್ರವೇಶ ಪರೀಕ್ಷೆಗಳು ಏಕಕಾಲದಲ್ಲಿ ನಡೆಸುವ ವೇಳಾಪಟ್ಟಿ ಪ್ರಕಟವಾಗಿದ್ದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಇದು ವಿದ್ಯಾರ್ಥಿಗಳ ಪೋಷಕರ ತೀವ್ರ ಅಸಮಾಧಾನಕ್ಕೂ ಕಾರಣವಾಗಿದೆ.
ಈ ಹಿಂದೆ ಕಾಮೆಡ್ ಮತ್ತು ಕಾನೂನು ಪದವಿ ಪ್ರವೇಶ ಪರೀಕ್ಷೆ ಬೇರೆ ಬೇರೆ ದಿನದಂದು ನಡೆಯುತ್ತಿತ್ತು. ಇಂಜಿನಿಯರಿಂಗ್ ನಲ್ಲಿ ತಮಗೆ ಬೇಕಿರುವ ಪದವಿ ಪ್ರವೇಶ ದೊರೆಯದ ಹಿನ್ನೆಲೆಯಲ್ಲಿ ಆಸಕ್ತ ವಿದ್ಯಾರ್ಥಿಗಳು ಕಾನೂನು ಪ್ರವೇಶ ಪರೀಕ್ಷೆ ಕುಳಿತುಕೊಳ್ಳುತ್ತಿದ್ದರು. ಆದರೆ, ಈ ಸಲ ಅಂತಹ ಅವಕಾಶದಿಂದ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ. ಏಪ್ರಿಲ್ 17 ರಂದು ಎರಡು ಪರೀಕ್ಷೆಗಳು ಏಕಕಾಲದಲ್ಲಿ ನಡೆಯುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ಪೋಷಕರಿಗೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಗೆ ಶುರುವಾಗಿದ್ದು, ಪರೀಕ್ಷೆಗೆ ಕುಳಿತುಕೊಳ್ಳುವ ಮೊದಲು ತಾನು ಯಾವ ಪದವಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು ಎನ್ನುವುದನ್ನು ಮೊದಲೇ ನಿರ್ಧರಿಸಿ ಪರೀಕ್ಷೆ ಬರೆಯುವುದು ಲೇಸು ಎನ್ನುವಂತಾಗಿದೆ. ಪ್ರವೇಶ ಪರೀಕ್ಷೆಗಳು ಭಾನುವಾರ ನಡೆಸುವುದು ವಾಡಿಕೆ. ಆದರೆ, ಲೋಕಸಭೆ ಚುನಾವಣೆಗಳ ಎಲ್ಲ ಪ್ರಕ್ರಿಯೆಗಳು ಏಪ್ರಿಲ್ 16 ರಂದು ಕೊನೆಗೊಳ್ಳಲಿವೆ. ಇದರಿಂದ ಏಪ್ರಿಲ್ 17 ರಂದು ಪರೀಕ್ಷೆ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಕಾಮೆಡ್ ಮೂಲಗಳು ತಿಳಿಸಿವೆ. ರಾಜ್ಯದ 168 ಕೇಂದ್ರಗಳಲ್ಲಿ ಕಾಮೆಡ್ ಕೆ ಪರೀಕ್ಷೆಗಳು ನಡೆಯಲಿವೆ. 17 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕಾಮೆಡ್ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications