ಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ

Yeddyurappa threatens to sue Bangarappa
ಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಂಗಾರಪ್ಪ ತಮ್ಮ ವಿರುದ್ಧ ಅಗನತ್ಯ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಈ ಮೂಲಕ ಮತದಾರರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ವಿನಾಕಾರಣ ಸುಳ್ಳು ಆರೋಪ ಮಾಡುತ್ತಾ ಜನರಿಗೆ ಪುಕ್ಕಟೆ ಮನರಂಜನೆ ನೀಡುತ್ತಿದ್ದಾರೆ. ಇಂತಹ ಕ್ರಮ ಒಳ್ಳೆಯದಲ್ಲ ಎಂದು ಅವರು ಸೂಕ್ಷ್ಮವಾಗಿ ಹೇಳಿದರು.

ಶಿವಮೊಗ್ಗ ಕ್ಷೇತ್ರದಲ್ಲಿ ಬರುವ ಲಂಬಾಣಿ ತಾಂಡಗಳ ಮತದಾರರಿಗೆ ಹಣದ ಅಮಿಷ ತೋರಿಸಿ ಗುರುತಿನ ಚೀಟಿ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಶುದ್ಧ ಸುಳ್ಳು ಎಂದು ನಿರಾಕರಿಸಿದ ಯಡಿಯೂರಪ್ಪ, ಬಂಗಾರಪ್ಪನವರು ಮಾತಿನ ಗಡಿ ಮೀರುತ್ತಿದೆ. ನಾಲಿಗೆ ಮೇಲೆ ನಿಗಾ ಇರಲಿ ಎಂದು ಅವರು ಎಚ್ಚರಿಕೆ ನೀಡಿದರು. ಅವರ ಮಾತುಗಳ ಸರಣಿ ಹೀಗೆ ಮುಂದುವರೆದರೆ ನ್ಯಾಯಾಲಯದ ಮೆಟ್ಟಿಲೇರಬೇಕಾಗುತ್ತದೆ ಎಂದು ಗುಡುಗು ಹಾಕಿದ್ದಾರೆ.

ಇದರ ಮಧ್ಯದಲ್ಲೇ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಬುಧವಾರ ಮಧ್ಯಾಹ್ನ ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದು, ಯಡಿಯೂರಪ್ಪ ಒಬ್ಬ ಉತ್ತಮ ಭವಿಷ್ಯ ಹೇಳುವ ಮನುಷ್ಯ. ಅವರು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ಹೇಳುವುದು ಒಳಿತು ಎಂದು ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ ನನ್ನ ಸಮ ಅಲ್ಲ. ಇನ್ನೂ ಅವರ ಮಗ ನನಗ್ಯಾವ ಲೆಕ್ಕ. ಈ ಚುನಾವಣೆಯಲ್ಲಿ ಅವರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಂಗಾರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+