ಅಂಬರೀಷ್, ರಾಘವೇಂದ್ರ ನಾಮಪತ್ರ ಸಲ್ಲಿಕೆ
ಬೆಂಗಳೂರು, ಏ. 9 : ಎರಡನೇ ಹಂತದ ಚುನಾವಣೆಗೆ 11 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂಬರೀಷ್, ಜೆಡಿಎಸ್ ನಿಂದ ಚೆಲುವರಾಯಸ್ವಾಮಿ, ಬಿಜೆಪಿಯಿಂದ ಎಲ್ ಆರ್ ಶಿವರಾಮೇಗೌಡ, ಶಿವಮೊಗ್ಗ ಕ್ಷೇತ್ರದಿಂದ ಬಿ ವೈ ರಾಘವೇಂದ್ರ, ಚಿಕ್ಕಮಗಳೂರಿನಿಂದ ಸದಾನಂದಗೌಡ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ.
ಅಲ್ಲದೇ ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಕೂಡಾ ತಮ್ಮ ನಾಮಪತ್ರ ಸಲ್ಲಿಸಿದರು. ಎರಡನೇ ಹಂತದ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಗೆ ಏ.13 ಕೊನೆಯ ದಿನವಾಗಿದೆ. ಎರಡನೇ ಹಂತದಲ್ಲಿ ನಡೆಯುವ 11 ಲೋಕಸಭೆ ಕ್ಷೇತ್ರದಲ್ಲಿ ಒಟ್ಟು 122 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು











Click it and Unblock the Notifications