ಸೇನಾಪಡೆ ವಾಹನ ಹರಿದು ಬಾಲಕನ ಸಾವು
ಬೆಂಗಳೂರು, ಏ. 9 : ಸೇನಾಪಡೆಯ ವಾಹನವೊಂದು ಹರಿದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ನಗರದ ಡಿಜೆ ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಘಟನೆ ಖಂಡಿಸಿದ ಸ್ಥಳೀಯರು ಸೇನಾಪಡೆಯ ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
ಸಯ್ಯದ್ ಸಲ್ಮಾನ್ (12) ಮೃತಪಟ್ಟ ದುರ್ದೈವಿ ಬಾಲಕ. ವೇಗವಾಗಿ ಬಂದ ಸೇನಾಪಡೆ ವಾಹನ ಬಾಲಕ ಸೈಕಲ್ ಗೆ ಡಿಕ್ಕಿಹೊಡೆಯಿತು. ಸೇನಾಪಡೆಯ ವಾಹನದ ಚಾಲಕ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ವಾಹನದಲ್ಲಿ ಮೂರು ಜನ ಸೇನಾಪಡೆ ಸಿಬ್ಬಂದಿ ಇದ್ದರು. ಅವರೆಲ್ಲರೂ ಮದ್ಯ ಸೇವಿಸಿದ್ದರು ಎಂದು ಸಾರ್ವಜನಿಕರ ಆರೋಪವಾಗಿದೆ.
ಘಟನೆ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಉದ್ರಿಕ್ತಗೊಂಡಿರುವ ಜನರನ್ನು ಸಮಾಧಾನಪಡಿಸಲು ಯತ್ನಿಸುತ್ತಿದ್ದಾರೆ. ಟ್ಯಾನರಿ ರಸ್ತೆಯಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಡಿಜೆ ಹಳ್ಳಿ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ












Click it and Unblock the Notifications