ಬಿಜೆಪಿ ಬಿಟ್ಟು ಯಾವುದೇ ಪಕ್ಷಕ್ಕೆ ಬೆಂಬಲ
ತುಮಕೂರು, ಏ. 9 : ನಾವು ತೃತೀಯರಂಗದಲ್ಲಿದ್ದರೂ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಕೇಂದ್ರದಲ್ಲಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆಗೆ ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರದಲ್ಲಿ ಬಿಜೆಪಿಯೇತರ ಯಾವುದೇ ಅಂಗ ಅಥವಾ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ತಮ್ಮ ಪಕ್ಷ ಬೆಂಬಲ ನೀಡುತ್ತೇವೆ. ತೃತೀಯರಂಗದಿಂದ ಕಾಲ್ಕಿತ್ತರೂ ಅಚ್ಚರಿ ಪಡಬೇಕಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಬಿಜೆಪಿಯೇತರ ಸರ್ಕಾರಕ್ಕೆ ಬೆಂಬಲ ನೀಡುವುದರಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಬೇಕೆನ್ನುವುದು ನಮ್ಮ ಉದ್ದೇಶ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಜನಶಕ್ತಿ ಪಕ್ಷದ ನಾಯಕ ರಾಮ್ ವಿಲಾಸ್ ಪಾಸ್ವಾನ್ ಪ್ರಧಾನಿಯಾಗುವುದಾದರೆ ಬೆಂಬಲ ನೀಡುವುದರಲ್ಲಿ ತಪ್ಪಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರವಾದರೂ, ಜನತಾದಳ ಬೆಂಬಲ ನೀಡಿದರೆ ತೃತಿಯರಂಗಕ್ಕೂ ಅನ್ವಯಿಸುತ್ತದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು











Click it and Unblock the Notifications