ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ

By Staff
|
Google Oneindia Kannada News

Pramod mutalik
ಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ ಆಯೋಗಕ್ಕೆ ಒಪ್ಪಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಬೇಕು ಎನ್ನುವುದು ಸಂಘಟನೆಯ ಉದ್ದೇಶ. ಆದ್ದರಿಂದ ಮತದಾರರಿಗೆ ಆಮಿಷ ಒಡ್ಡದಂತೆ ತಡೆಯಲು ಹಲವು ಸಮಿತಿಗಳನ್ನು ನೇಮಿಸಲಾಗಿದೆ ಎಂದು ಶ್ರೀರಾಮಸೇನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಎನ್ ಎಸ್ ರವಿಚಂದ್ರ ಹೇಳಿದ್ದಾರೆ.

ಮೈಸೂರಿನ ಕ್ಯಾತಮಾರನಹಳ್ಳಿಗೆ ತೆರಳಿದ್ದ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಿನಾಕಾರಣ ಬಂಧಿಸಿದ್ದಾರೆ. ಆದರೆ, ಇದೇ ಸಂದರ್ಭದಲ್ಲಿ ಇತರೆ ಧರ್ಮಗಳ ಮುಖಂಡರೂ ಅಲ್ಲಿಗೆ ಭೇಟಿ ನೀಡಿದ್ದಾರೆ. ಅವರನ್ನು ಏಕೆ ಬಂಧಿಸಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಸಂಪೂರ್ಣ ಹಿಂದು ವಿರೋಧಿ ಕೆಲಸ ಮಾಡತೊಡಗಿದೆ ಎಂದು ಅವರು ಆರೋಪಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X