ಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ

ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಬೇಕು ಎನ್ನುವುದು ಸಂಘಟನೆಯ ಉದ್ದೇಶ. ಆದ್ದರಿಂದ ಮತದಾರರಿಗೆ ಆಮಿಷ ಒಡ್ಡದಂತೆ ತಡೆಯಲು ಹಲವು ಸಮಿತಿಗಳನ್ನು ನೇಮಿಸಲಾಗಿದೆ ಎಂದು ಶ್ರೀರಾಮಸೇನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಎನ್ ಎಸ್ ರವಿಚಂದ್ರ ಹೇಳಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿಗೆ ತೆರಳಿದ್ದ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಿನಾಕಾರಣ ಬಂಧಿಸಿದ್ದಾರೆ. ಆದರೆ, ಇದೇ ಸಂದರ್ಭದಲ್ಲಿ ಇತರೆ ಧರ್ಮಗಳ ಮುಖಂಡರೂ ಅಲ್ಲಿಗೆ ಭೇಟಿ ನೀಡಿದ್ದಾರೆ. ಅವರನ್ನು ಏಕೆ ಬಂಧಿಸಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಸಂಪೂರ್ಣ ಹಿಂದು ವಿರೋಧಿ ಕೆಲಸ ಮಾಡತೊಡಗಿದೆ ಎಂದು ಅವರು ಆರೋಪಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications