ಶಿವಮೊಗ್ಗದಲ್ಲಿ ಇಬ್ಬರು ನೌಕರರ ಅಮಾನತ್ತು
ಶಿವಮೊಗ್ಗ, ಏ. 11 : ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿ ಅಭ್ಯರ್ಥಿಯೊಬ್ಬರ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಮಾಹಿತಿ ಆಧಾರದ ಮೇಲೆ ನರಸಿಂಹಮೂರ್ತಿ ಹಾಗೂ ಆರ್.ಆಂಜನೇಯ ಎಂಬ ಇಬ್ಬರು ನೌಕರರನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರು ಅಮಾನತ್ತುಗೊಳಿಸಿದ್ದಾರೆ.
ಶಿವಮೊಗ್ಗ ನಗರ ಘಟಕದ ಚುನಾವಣಾ ನೀತಿ ಸಂಹಿತೆ ಅನುಷ್ಠಾನ ಸಮಿತಿಯು ತನಿಖೆ ನಡೆಸಿ ನೀಡಿದ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಇಬ್ಬರು ನೌಕರರನ್ನು ಅಮಾನತ್ತುಗೊಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications