ಮಂತ್ರಾಲಯ ಸುಶಮೀಂದ್ರ ಶ್ರೀಗಳು ವಿಧಿವಶ
ಬೆಂಗಳೂರು, ಏ.11 : ಕಳೆದ 15 ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಂತ್ರಾಲಯದ ಸುಶಮೀಂದ್ರ ಸ್ವಾಮೀಜಿಗಳು ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದರು. ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಶ್ರೀಗಳಿಗೆ 75 ವರ್ಷ ವಯಸ್ಸಾಗಿತ್ತು.
ಕಳೆದ ಎರಡು ತಿಂಗಳಿಂದ ಶ್ರೀಗಳ ದೇಹಸ್ಥಿತಿ ಹದಗೆಟ್ಟಿತ್ತು. ಮಂಡಿನೋವು ಹೆಚ್ಚಾಗಿದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಡಿ ನೋವಿನ ಜೊತೆಗೆ ಉಸಿರಾಟದ ತೊಂದರೆ ಸೇರಿಕೊಂಡಿದ್ದರಿಂದ ಶನಿವಾರ ಮಧ್ಯಾಹ್ನ ಶ್ರೀಗಳು ಅಪಾರ ಭಕ್ತ ಸಮೂಹವನ್ನು ಅಗಲಿದರು. ಭಾನುವಾರ ಬೆಳಗ್ಗೆ 9 ರಿಂದ 11 ಗಂಟೆಯೊಳಗೆ ಶ್ರೀಗಳು ಅಂತ್ಯಸಂಸ್ಕಾರ ಧಾರ್ಮಿಕ ವಿಧಿವಿಧಾನಗಳ ಮೂಲಕ ನೆರವೇರಲಿದೆ ಎಂದು ಮಂತ್ರಾಲಯ ಮಠದ ಕಾರ್ಯದರ್ಶಿ ರಾಜಗೋಪಾಲಾಚಾರ್ಯ ತಿಳಿಸಿದರು.
ಶ್ರೀಗಳ ಪಾರ್ಥೀವ ಶರೀರವನ್ನು ಈಗಾಗಲೇ ಮಂತ್ರಾಲಯಕ್ಕೆ ಸಾಗಿಸಲಾಗುತ್ತಿದ್ದು, ನಾಳೆ ನಡೆಯುವ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಸಕಲ ವ್ಯವಸ್ಥೆಗಳಿಗೂ ಕ್ರಮಕೈಗೊಳ್ಳಲಾಗಿದೆ ಎಂದು ರಾಜಗೋಪಾಲಾಚಾರ್ಯ ಹೇಳಿದರು. ಮಂತ್ರಾಲಯ ಮಠ ಅಪಾರ ಭಕ್ತ ಸಮೂಹ ಹೊಂದಿದ್ದು, ಸುಶಮೀಂದ್ರ ಶ್ರೀಗಳ ನಿಧನದಿಂದ ಭಕ್ತ ಕೋಟಿ ಶೋಕಸಾಗರದಲ್ಲಿ ಮುಳುಗಿದೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications