ಮಹಿಮಾ ಪಟೇಲರಿಂದ ಜನಜಾಗೃತಿ ಅಭಿಯಾನ

ಅಭಿಯಾನ ಪ್ರಾರಂಭಿಸುವ ಮೊದಲು ಯಾಗ ನಡೆಸಿದ ಮಹಿಮಾ, ಚುನಾವಣಾ ಅಕ್ರಮಗಳ ವಿರುದ್ಧ ಜನ ಜಾಗೃತರಾಗಬೇಕು ಮತ್ತು ಅರ್ಹ ವ್ಯಕ್ತಿಗೆ ಮತ ನೀಡಬೇಕು ಎಂದು ಅಭಿಯಾನದ ಉದ್ದೇಶ ತಿಳಿಸಿದರು.
ಚುನಾವಣಾ ಪ್ರಚಾರದಲ್ಲಿ ಕೋಟಿ ಕೋಟಿ ಹಣ ದುರುಪಯೋಗವಾಗುತ್ತಿದೆ. ಇದನ್ನು ಜನರೇ ತಡೆಯಬೇಕು. ಈಗನ ಕಾಲದಲ್ಲಿ ಯಾರು ಕಡಿಮೆ ಕೆಟ್ಟ ವ್ಯಕ್ತಿ ಎಂಬುದನ್ನು ನೋಡುವ ಪರಿಸ್ಥಿತಿ ಎದುರಾಗಿದೆ. ಇದರ ಬದಲಾಗಿ ಒಳ್ಳೆಯ ಮತ್ತು ಅರ್ಹ ವ್ಯಕ್ತಿಯನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದು ಅವರು ಹೇಳಿದರು.
ಯಾವುದೇ ಪಕ್ಷದ ಪರ ನಿಲ್ಲದ, ಹಣ ಹಂಚುವ ದುರ್ವ್ಯವಹಾರದಲ್ಲಿ ತೊಡಗದ ಅರ್ಹ ವ್ಯಕ್ತಿಗೆ ಜನ ಮತ ಹಾಕಬೇಕು. ಬದಲಾಗಿ ಮತದಾರರೇ ತಮಗೆ ತೋಚಿದಷ್ಟು ಹಣ ಅಭ್ಯರ್ಥಿಗೆ ನೀಡಿ ಮತ ನೀಡಬೇಕು. ಇದರಿಂದ ಅಭ್ಯರ್ಥಿಗೂ ಜನರ ಬಗ್ಗೆ ಬದ್ಧತೆ ಮತ್ತು ಜವಾಬ್ದಾರಿ ಬಂದಂತಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಎಲ್ಲ 28 ಕ್ಷೇತ್ರಗಳಲ್ಲಿ ಮನೆಮನೆಗೂ ತೆರಳಿ ಜಾಗೃತಿ ಎಬ್ಬಿಸುವುದಾಗಿ ಅವರು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚೆನ್ನಗಿರಿ ಕ್ಷೇತ್ರದಿಂದ ಸ್ಪರ್ಧಿಸಿ ಮಹಿಮಾ ಸೋತಿದ್ದರು. ನಂತರ ಮೌನವ್ರತ ಮತ್ತು ಪಾದಯಾತ್ರೆಯ ಮುಖಾಂತರ ಗಮನ ಸೆಳೆಯಲು ಯತ್ನಿಸಿದ್ದರು. ಇತ್ತೀಚೆಗೆ ಪತ್ರಕರ್ತರಿಗೆ ಆಮಿಷ ತೋರಿಸಿ ತಮಗರಿವಿಲ್ಲದಂತೆ ವಿವಾದಕ್ಕೆ ನಾಂದಿ ಹಾಡಿದ್ದರು. ಸದ್ಯಕ್ಕೆ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಿಲ್ಲ ಮತ್ತು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನೂ ನೀಡಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications