ಗಣಿಧಣಿಗಳ ಹೇಳಿಕೆಗೆ ದೇವೇಗೌಡ ತೀವ್ರ ವಿರೋಧ
ಹಾವೇರಿ, ಏ. 13 : ಹೋರಾಟಕ್ಕೆ ಹೆಸರುವಾಸಿಯಾಗಿರುವ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರು ರಾಜಕೀಯ ಜೀವನದಲ್ಲಿ ತಮಗೆ ಎದುರಾದ ವಿರೋಧಿಗಳನ್ನು ಮಣಿಸುತ್ತಲೇ ಬಂದಿದ್ದಾರೆ. ಅವರ ಹೊಡೆತಕ್ಕೆ ಸೋತು ಸುಣ್ಣವಾಗಿರುವ ಅನೇಕ ಮುಖಂಡರುಗಳು ನಮ್ಮ ಕಣ್ಮುಂದೆ ಇದ್ದಾರೆ. ಇಂಥ ಎದೆಗಾರಿಕೆ ಇರುವ ಗೌಡರಿಗೆ ಹೋರಾಟ ಸಾಕು ಎನಿಸಿದೆಯಾ ? ಗೊತ್ತಿಲ್ಲ.
ಬ್ಯಾಡಗಿ ಪಟ್ಟಣದಲ್ಲಿ ಹಾವೇರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಕುಮಾರಗೌಡ ಪಾಟೀಲ್ ಪರ ಪ್ರಚಾರ ಸಭೆ ಭಾಗವಹಿಸಿದ ಗೌಡರು, ಮಾತೆತ್ತಿದರೆ ಜೆಡಿಎಸ್ ಸತ್ತಿದೆ. ಸಂಸ್ಕಾರ ಮಾಡುತ್ತೇವೆ, ತಿಥಿ ಮಾಡುತ್ತೇವೆ ಎಂದು ಹೆದರಿಸುವ ಬಳ್ಳಾರಿ ಗಣಿಧಣಿಗಳನ್ನು ಕಂಡು ಭಯವಾಗಿದೆ. ಇಂತವರ ವಿರುದ್ಧ ಪಕ್ಷದ ಅಭ್ಯರ್ಥಿಗಳ ಪಾಡೇನು ? ಈ ಹಿನ್ನೆಲೆಯಲ್ಲಿ ಪಕ್ಷ ಅಭ್ಯರ್ಥಿಗಳನ್ನು ನಿಲ್ಲಿಸಿಲ್ಲ ಎಂದು ಮನಸ್ಸಿಗೆ ನಾಟುವಂತ ಹೇಳಿಕೆ ನೀಡಿದ್ದಾರೆ.
ದೇಶದ ಖನಿಜ ಸಂಪತ್ತನ್ನು ಅವ್ಯಾಹತವಾಗಿ ಲೂಟಿ ಮಾಡುತ್ತಿರುವ ಗಣಧಣಿಗಳ ಹಣದ ಮದ ಇಂತಹ ದುರಹಂಕಾರದ ಮಾತುಗಳನ್ನಾಡಿಸುತ್ತಿದೆ. ಇದನ್ನೇ ಒಳಒಪ್ಪಂದ ಅನ್ನುವುದಾದರೆ ನಾನೇನು ಮಾಡಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು. ತಮ್ಮ ಸಾಧನೆಗಳ ಜಪ ಸಾಕು ಮುಂದೇನು ಎಂದು ತೋಚದೆ ಕಾಂಗ್ರೆಸ್ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ ಎಂದು ಕ್ಷುಲ್ಲಕ ಆರೋಪ ಮಾಡುವವರ ಬಗ್ಗೆ ನಾನೇನು ಪ್ರತಿಕ್ರಿಯಿಸಲಿ ಎಂದ ಮಾಜಿ ಪ್ರಧಾನಿ, ಬಳ್ಳಾರಿಯಲ್ಲಿ ನಿತ್ಯ ದೊರೆಯುತ್ತಿರುವ ಅಕ್ರಮ ಹಣದ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications