ನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ

ಕೋಲಾರ ಜಿಲ್ಲೆಯ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರ ರಚನೆಗೆ ತೃತೀಯ ರಂಗ ಕಿಂಗ್ ಮೇಕರ್ ಪಾತ್ರ ವಹಿಸಲಿದೆ ಎಂದರು. ಎಚ್ ಡಿ ದೇವೇಗೌಡರಾಗಲಿ ಇಲ್ಲವೇ ತಾವಾಗಲಿ ಪ್ರಧಾನಮಂತ್ರಿ ಹುದ್ದೆಯ ಆಕಾಂಕ್ಷಿಗಳಲ್ಲ ಎಂದು ಸ್ಪಷ್ಟಪಡಿಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗಿಂತ ಉತ್ತಮ ಸಾಧನೆ ಮಾಡುವುದೇ ನಮ್ಮ ಏಕೈಕ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತ ನೀಡಿ ಎಂದು ಕುಮಾರಸ್ವಾಮಿ ಮತದಾರರಲ್ಲಿ ಮನವಿ ಮಾಡಿಕೊಂಡರು.
ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಇದಕ್ಕೆ ಉದಾಹರಣೆ ನೀಡಬೇಕೆಂದರೆ, ಪಕ್ಕದ ಆಂಧ್ರಪ್ರದೇಶ ಮತ್ತು ತಮಿಳುನಾಡುಗಳನ್ನು ನೋಡಬೇಕಾಗುತ್ತಿದೆ. ಟಿಡಿಪಿ ಆಂಧ್ರಪ್ರದೇಶದ ಅಭಿವೃದ್ಧಿ ರೂವಾರಿಯಾದರೆ, ಡಿಎಂಕೆ, ಎಐಎಡಿಎಂಕೆ ಪಕ್ಷಗಳು ರಾಜ್ಯದಿಂದ ಹೆಚ್ಚು ಮಂದಿ ಸಂಸದರನ್ನು ಆರಿಸಿ ಕಳಿಹಿಸುತ್ತೇವೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ಎಲ್ಲ ಅನುದಾನವನ್ನು ತೆಗೆದುಕೊಂಡು ಬರುವಲ್ಲಿ ಅಲ್ಲಿಯ ನಾಯಕರು ಸಫಲರಾಗಿದ್ದಾರೆ. ಆದ್ದರಿಂದ ಈ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಾಗಿರುವ ಜೆಡಿಎಸ್ ಗೆ ಮತ ನೀಡಿ ನಮ್ಮ ಕೈ ಬಲಪಡಿಸಿ ಎಂದು ಕುಮಾರಸ್ವಾಮಿ ವಿನಂತಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications