ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ

ಪಿಲಿಭಿತ್ ಲೋಕಸಭೆ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸುವ ಸಲುವಾಗಿ ವರುಣ್ ಗಾಂಧಿ ನಾಮಪತ್ರ ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡುವ ಸಾಧ್ಯತೆ ಇದೆ. ಆದರೆ, ಚುನಾವಣೆ ಪ್ರಚಾರ ವೇಳೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಲಿಖಿತವಾಗಿ ಬರೆದುಕೊಟ್ಟರೆ ಮಾತ್ರ ನಾಮಪತ್ರ ಸಲ್ಲಿಸಲು ಅವಕಾಶ ನೀಡುವ ಎಲ್ಲ ಲಕ್ಷಣಗಳು ಇವೆ.
ಕಳೆದ ತಿಂಗಳ ಮಾರ್ಚ್ 17 ರಂದು ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಹಿಂದೂಗಳ ಮೇಲೆ ಕೈ ಎತ್ತಿದರೆ, ಕೈ ಕಡಿಯುವುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಷ್ಟ್ರಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಉತ್ತರ ಪ್ರದೇಶದ ಸರ್ಕಾರ ವರುಣ್ ಗಾಂಧಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಬಂಧಿಸಿದೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications