ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ

By Staff
|
Google Oneindia Kannada News

SC puts off Varun's plea against NSA to Apr 16
ನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು.

ಪಿಲಿಭಿತ್ ಲೋಕಸಭೆ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸುವ ಸಲುವಾಗಿ ವರುಣ್ ಗಾಂಧಿ ನಾಮಪತ್ರ ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡುವ ಸಾಧ್ಯತೆ ಇದೆ. ಆದರೆ, ಚುನಾವಣೆ ಪ್ರಚಾರ ವೇಳೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಲಿಖಿತವಾಗಿ ಬರೆದುಕೊಟ್ಟರೆ ಮಾತ್ರ ನಾಮಪತ್ರ ಸಲ್ಲಿಸಲು ಅವಕಾಶ ನೀಡುವ ಎಲ್ಲ ಲಕ್ಷಣಗಳು ಇವೆ.

ಕಳೆದ ತಿಂಗಳ ಮಾರ್ಚ್ 17 ರಂದು ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಹಿಂದೂಗಳ ಮೇಲೆ ಕೈ ಎತ್ತಿದರೆ, ಕೈ ಕಡಿಯುವುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಷ್ಟ್ರಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಉತ್ತರ ಪ್ರದೇಶದ ಸರ್ಕಾರ ವರುಣ್ ಗಾಂಧಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಬಂಧಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X