ಏಪ್ರಿಲ್ 23 ಮತ್ತು 30 ರಂದು ಸಾರ್ವತ್ರಿಕ ರಜೆ
ಬೆಂಗಳೂರು, ಏ. 13 : ಏಪ್ರಿಲ್ 23 ಹಾಗೂ ಮೇ 30 ರಂದು ನಡೆಯುವ ರಾಜ್ಯದಲ್ಲಿ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಕೇಂದ್ರ ಸರ್ಕಾರದ ಕಚೇರಿಗೆಗಳಿಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳಿಗೆ, ಶಿಕ್ಷಣ ಸಂಸ್ಥೆಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ) ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುವ ದಿನಾಂಕಗಳಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಸದರಿ ದಿನಾಂಕದಂದು ಚುನಾವಣಾ ಕಾರ್ಯದಲ್ಲಿ ಹಾಜರಾಗತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮದ್ಯ ಮಾರಾಟ ನಿಷೇಧ
ರಾಜ್ಯದಲ್ಲಿ ಮೊದಲನೇ ಹಂತದ ಮತದಾನವು ಏಪ್ರಿಲ್ 23 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ನಡೆಯುವ ಸ್ಥಳಗಳಲ್ಲಿ ಏಪ್ರಿಲ್ 21 ರ ಸಂಜೆ 5 ಗಂಟೆಯಿಂದ 24 ರ ಸಂಜೆ 5 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ರದ್ದುಪಡಿಸಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications