ಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ

ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ. ಆದರೆ, ಬಿಜೆಪಿ ಜನರೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಚುನಾವಣೆಯಲ್ಲಿ ದಾಖಲೆ ಗೆಲುವು ಸಾಧಿಸುವುದು ಖಚಿತ ಎಂದು ಅವರು ವಿಶ್ವಾಸದಿಂದ ನುಡಿದರು.
ಮಹಿಳೆಯರು ಅಳುವ ಬದಲು ದೇಶವನ್ನು ಆಳಬೇಕು. ಉತ್ತಮ ಸರ್ಕಾರ ರಚನೆಯಲ್ಲಿ ಭಾಗಿಗಗಳಾಬೇಕು. ಮಹಿಳೆಯರ ಸಂರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಶ್ರುತಿ ಹೇಳಿದರು. ತಾನು ಸಿನೆಮಾದಲ್ಲಿ ನಿರ್ವಹಿಸುವ ಪಾತ್ರ ಕೇವಲ ಕಾಲ್ಪನಿಕ ಕಥೆಯಾದರೂ ಅದು ನಿಜ ಬದುಕಿನ ಕಥೆಯ ಭಾಗ. ಮಹಿಳೆಯರು ಸ್ವಾವಲಂಬಿಗಳಾಗಬೇಕು. ಆತ್ಮಸ್ಥೈರ್ಯ ಬೆಳಸಿಕೊಳ್ಳಬೇಕು. ಇದಕ್ಕೆ ಬಿಜೆಪಿ ಅವಕಾಶ ನೀಡುತ್ತದೆ. ಸಮಾಜದ ಒಳಿತನ್ನು ತಾಯಿ ಬಯಸುತ್ತಾಳೆ ಎಂದು ಶ್ರುತಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications