ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ

ಪಾಕಿಸ್ತಾನ ಭಯೋತ್ಪಾದಕರ ಸ್ವರ್ಗವಾಗಿದೆ. ಇದರ ನಿವಾರಣೆಗೆ ವಿಶ್ವ ಮಟ್ಟದಲ್ಲಿ ಮಾತುಕತೆ ನಡೆಸುವುದಲ್ಲದೇ, ಪಾಕ್ ನೆಲೆದಲ್ಲಿ ಬೀಡುಬಿಟ್ಟಿರುವ ಉಗ್ರರ ಅಡಗುತಾಣವನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಜನತಾ ಪಕ್ಷದ ಸರ್ಕಾರ ಸಿದ್ದವಿದೆ ಎಂದರು. ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕ ಸಂಘಟನೆ ಮಟ್ಟಹಾಕಲು ಪಾಕ್ ಸರ್ಕಾರಕ್ಕೆ ಬಿಜೆಪಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಆದರೆ, ಅದಕ್ಕೂ ಮುಂಚೆ ಪಾಕ್ ಸರ್ಕಾರ ಬಂಧಿಸಿರುವ ಎಲ್ಲ ಭಯೋತ್ಪಾದಕರಿಗೆ ಶಿಕ್ಷೆ ನೀಡಲಿ ಎಂದು ಅವರು ಆಗ್ರಹಿಸಿದರು.
ಭಯೋತ್ಪಾದನೆ ಹತ್ತಿಕ್ಕುವಲ್ಲಿ ಯುಪಿಎ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ. ಕಾಂಗ್ರೆಸ್ ಪಕ್ಷ ತಾಳಿರುವ ಮೃದುಧೋರಣೆಯೇ ಇದಕ್ಕೆ ಸ್ಪಷ್ಟ ನಿದರ್ಶನ. ಮುಂಬೈ ದಾಳಿ ರಾಷ್ಟ್ರೀಯ ಅವಮಾನ. ಸರ್ಕಾರಕ್ಕೆ ದೇಶದ ಸಮಗ್ರತೆ, ಭದ್ರತೆ ಕಾಪಾಡಲು ಸಾಧ್ಯವಾಗಿಲ್ಲ. ಸರ್ಕಾರ ಇದ್ದು ಇಲ್ಲದಂತಾಗಿದೆ ಎಂದು ರಾಜನಾಥ್ ಸಿಂಗ್ ಲೇವಡಿ ಮಾಡಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications