ಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಅಭ್ಯರ್ಥಿ ಸುರೇಶ್ ಅಂಗಡಿ ಪರ ಮತಯಾಚಿಸುವ ಸಲುವಾಗಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಪ್ರಚಾರ ಭಾಷಣ ಆರಂಭಿಸುತ್ತಿದ್ದಂತೆ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರ ಗುಂಪು ಸಿಎಂ ವಿರುದ್ಧ ದಿಕ್ಕಾರ ಘೋಷಣೆ ಕೂಗತೊಡಗಿದರು. ಈ ಗೊಂದಲದ ನಡುವೆಯೇ ಭಾಷಣ ಆರಂಭಿಸಿದ ಯಡಿಯೂರಪ್ಪ, ಒಂದು ಹಂತದಲ್ಲಿ ಮಹಿಳೆಯರ ದಿಕ್ಕಾರ ಘೋಷಣೆ ಮಿತಿಮೀರಿದ್ದರಿಂದ ಸಿಡಿಮಿಡಿಗೊಂಡರು.
ಏನ್ ಬೇಕು ಕೇಳ್ರಿ ಅವರಿಗೆ, ಏಕೆ ಧರಣಿ ಆರಂಭಿಸಿದ್ದಾರೆ ಎಂದು ಸಿಎಂ ಪೊಲೀಸರಿಗೆ ಆದೇಶ ನೀಡಿದರು. ಸಮಸ್ಯೆಗಳಿದ್ದರೆ ಬಗೆಹರಿಸೋಣ, ಸಭೆಗೆ ಅಡ್ಡಿಪಡಿಸುವುದು ಸರಿಯಲ್ಲ. ಸ್ವಲ್ಪ ಸಮಾಧಾನದಿಂದಿರಿ ಎಂದು ಯಡಿಯೂರಪ್ಪ ಗುಡುಗಿದರು. ಮುಖ್ಯಮಂತ್ರಿಗಳ ಎಚ್ಚರಿಕೆ ಗಣನೆಗೆ ತೆಗೆದುಕೊಳ್ಳದ ಕರವೇ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಮುಂದುವರೆಸಿದರು.
ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ತೆಗೆಯುವ ವಿಷಯಕ್ಕೆ ಸಂಬಂಧಿಸಿದಂತೆ ಸಂಸದ ಸುರೇಶ್ ಅಂಗಡಿ ಅವರು ಭಗವಾಧ್ವಜ ತೆಗೆಯಲು ವಿರೋಧಿಸಿದ್ದರು. ಕರವೇ ಭಗವಾಧ್ವಜ ತೆಗೆಯಲು ಮುಂದಾದಾಗ ಸಂಸದ ಅಂಗಡಿ ಮತ್ತು ಶಾಸಕ ಸಂಜಯ್ ಪಾಟೀಲ್ ಎಂಇಎಸ್ ಪರ ವಹಿಸಿ ಮಾತನಾಡಿ, ಧ್ವಜ ತೆಗೆಯಲು ಅವಕಾಶ ವಿರೋಧಿಸಿದ್ದರು. ಇದು ರಾಜ್ಯಾದ್ಯಂತ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.
ನಂತರ ಪೊಲೀಸರು ಮಹಿಳೆಯರಮ ಮನವೊಲಿಸುವ ಪ್ರಯತ್ನ ಮುಂದುವರದೆ ಇತ್ತು. ಈ ಮಧ್ಯ ಮಾತು ಮುಂದುವೆರೆಸಿದ ಯಡಿಯೂರಪ್ಪ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಳ್ಳಾರಿ ಸಚಿವರಾದ ರೆಡ್ಡಿಗಳು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಜೈಲಿಗೆ ಕಳಿಸುವೆ ಎಂಬ ಸಿದ್ದು ಮಾತಿಗೆ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರಿಗೆ ದೇವರು ಬುದ್ಧಿ ಕೊಡಲಿ ಎಂದು ಸಿಎಂ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications