ವರುಣ್ ಗಾಂಧಿ ಸೋಲಿಸುವೆ, ರಿಯಾಜ್ ಅಹ್ಮದ್
ಪಿಲಿಭಿತ್, ಏ. 14 : ಉತ್ತರ ಪ್ರದೇಶದ ಪಿಲಿಭಿತ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ವಿರುದ್ಧ ಸಮಾಜವಾದಿ ಪಕ್ಷದ ಹುರಿಯಾಳು ರಿಯಾಜ್ ಅಹ್ಮದ್ ಘಟನೆ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವರುಣ್ ಗಾಂಧಿ ನನ್ನನ್ನು ಜಾಗತಿಕ ಮಟ್ಟದ ಭಯೋತ್ಪಾದಕ ಒಸಾಮ ಬಿನ್ ಲಾಡೆನ್ ಹೋಲಿಸಿದರೂ ನಾನು ಸುಮ್ಮನಿರುವೆ. ಇದು ಜನರ ಮನಸ್ಸಿಗೆ ತಾಕಿದ್ದು, ನನ್ನ ಗೆಲುವು ಖಚಿತ ಎಂದು ಸ್ಪಷ್ಟಪಡಿಸಿದರು.
ನಾನು ಶಾಂತಿಯಿಂದಿರುವುದೆ ಆತನ ಸೋಲಿಗೆ ಕಾರಣವಾಗುತ್ತಿದೆ. ವರುಣ್ ಕೋಮು ಪ್ರಚೋದಕ ಮಾತುಗಳಿಗೆ ನನ್ನ ಮೌನವೇ ಪ್ರಬಲ ಅಸ್ತ್ರ. ಇದೇ ಅಸ್ತ್ರಿದಿಂದ ಆತನನ್ನು ಸೋಲಿಸುವೆ ಎಂದು ರಿಯಾಜ್ ಅಹ್ಮದ್ ವಿಶ್ವಾಸದಿಂದ ಹೇಳಿದರು. ಈ ಘಟನೆಯಲ್ಲಿ ವರುಣ್ ಗಾಂಧಿ ಒಂದಪು ನೆಪ ಮಾತ್ರ. ಆದರೆ, ಭಾರತೀಯ ಜನತಾ ಪಕ್ಷ ಕೋಮು ಪ್ರಚೋದನೆ ಬೆಂಬಲಿಸುವುದನ್ನು ಇಡೀ ದೇಶದ ಕಣ್ಣಾರೆ ಕಂಡಿದೆ. ಪ್ರಸ್ತುತ ಲೋಕಸಭೆಯಲ್ಲಿ ಅವರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಪಿಲಿಭಿತ್ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡ ವರುಣ್ ಗಾಂಧಿ ಹಿಂದೂಗಳ ಮೇಲೆ ಕೈಯತ್ತಿದರೆ, ಕೈ ಕಡಿಯುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೇ ವಿರುದ್ಧ ಸಮಾಜವಾಗಿ ಪಕ್ಷದಿಂದ ಸ್ಪರ್ಧಿಸಿರುವ ಒಸಾಮಾ ಬಿನ್ ಲಾಡೆನ್ ಅಂತವರನ್ನು ಸೋಲಿಸುವುದು ನನ್ನ ಏಕೈಕ ಗುರಿ ಎಂದು ಹೇಳಿದರು. ರಿಯಾಜ್ ಅಹ್ಮದ್ ಅವರು ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಹೋಲಿಕೆ ಹೊಂದಿದ್ದಾರೆ.
ಪಿಲಿಭಿತ್ ಕ್ಷೇತ್ರದ ಸಂಸದೆಯಾಗಿದ್ದ ಮೇನಕಾ ಗಾಂಧಿ ವಿರುದ್ದ ಹರಿಹಾಯ್ದ ರಿಯಾಜ್ ಅಹ್ಮದ್, ಕೋಮು ಭಾವನೆ ಕೆರಳಿಸುವುದು ಜೊತೆಗೆ ತಮ್ಮ ಮಗನ ಘಟನೆಯನ್ನು ವಿವರಿಸಿ ಮತ ಕೇಳುವುದನ್ನು ಅವರು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಎರಡು ಅವಧಿ ಈ ಕ್ಷೇತ್ರ ಸಂಸದೆಯಾಗಿರುವ ಮೇನಕಾ ಗಾಂಧಿ ಅವರ ಸಾಧನೆ ಏನೆಂಬುದು ಇಡೀ ಕ್ಷೇತ್ರದ ಜನತೆ ಗೊತ್ತಿದೆ ಎಂದು ರಿಯಾಜ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications