ಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ

Siddaramaiah
ಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಗುಡುಗಿದ್ದಾರೆ.

ಕುಮಾರಸ್ವಾಮಿ ಮತ್ತು ಜನಾರ್ದನರೆಡ್ಡಿ ಕೈಗೆ ಕೋಳ ತೋಡಿಸುವ ಕುರಿತು ಕಿತ್ತಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದಲ್ಲಿ ಈ ಇಬ್ಬರು ಜೈಲಿಗೆ ಅಟ್ಟುತ್ತೇವೆ ಎಂದು ಸಿದ್ದು ಅಬ್ಬರಿಸಿದರು. ಬಿಜಾಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ರಾಥೋಡ್ ಪರ ಪ್ರಚಾರ ಕಾರ್ಯ ತೊಡಗಿದ್ದ ಸಿದ್ದರಾಮಯ್ಯ, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಗಣಿಧಣಿಗಳು ರಾಜ್ಯದ ಸಂಪತ್ತು ಲೂಟಿ ಹೊಡೆದು ಅಕ್ರಮವಾಗಿ ಸಂಪಾದನೆ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ರೆಡ್ಡಿಗಳ ಕೈಗೊಂಬೆಯಾಗಿದ್ದಾರೆ ಎಂದು ಸಿದ್ದು ಟೀಕಿಸಿದರು. ದೇಶದ ರಕ್ಷಣೆಗೆ ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರಲು ಮೂಲಕ ಮನಮೋಹನ್ ಸಿಂಗ್ ಅವರನ್ನು ಇನ್ನೊಂದು ಬಾರಿ ಪ್ರಧಾನಮಂತ್ರಿಯನ್ನಾಗಿ ಮಾಡಬೇಕು. ಅದಕ್ಕಾಗಿ ನೀವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿಕೊಂಡರು.

ದೇಶದ ದೀನ ದಲಿತರು ಹಾಗೂ ಅಲ್ಪಸಂಖ್ಯಾತರ ಏಳ್ಗೆ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ. ಬಿಜೆಪಿಯವರು ಕ್ರಿಮಿನಲ್ ಗಳಾಗುತ್ತಿದ್ದಾರೆ. ಇಂಥವರ ಕೈಗೆ ದೇಶದ ಅಧಿಕಾರದ ಚುಕ್ಕಾಣಿ ವಹಿಸದಿರುವುದೇ ಸೂಕ್ತ ಎಂದು ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರ ಪುಕ್ಕಟೆ ವಿದ್ಯುತ್ ಕೊಡುತ್ತೇವೆ ಎಂದು ಸುಳ್ಳು ಹೇಳಿ ಜನತೆಗೆ ನಂಬಿಸಿ ಮೋಸ ಮಾಡಿದೆ. ಈ ಚುನಾವಣೆಯಲ್ಲಿ ಆ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಎಂದು ಮತದಾರರನ್ನು ಕೇಳಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+