ಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ

ಮನಮೋಹನ್ ಸಿಂಗ್ ಅಸಮರ್ಥ ಪ್ರಧಾನಮಂತ್ರಿ. ಸರ್ಕಾರದ ಅಷ್ಟೂ ನಿರ್ಧಾರಗಳು ಸೋನಿಯಾ ಗಾಂಧಿ ಅವರೇ ನಿಭಾಯಿಸುತ್ತಾರೆ ಎಂದು ಪದೆಪದೇ ಟೀಕಿಸುತ್ತಿರುವ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಸೋನಿಯಾ ಗಾಂಧಿ ಇಂದು ತಿರುಗೇಟು ನೀಡಿದರು. ಬಿಜೆಪಿಯಲ್ಲಿ ಬಹುದೊಡ್ಡ ನಾಯಕ ಎನಿಸಿಕೊಂಡಿರುವ ಅಡ್ವಾಣಿ, ಒಂದೇ ಒಂದು ವಿಷಯದಲ್ಲಿ ಸ್ವಂತಿಕೆಯನ್ನು ಪ್ರದರ್ಶಿಸಲಿ ಎಂದು ಸವಾಲು ಎಸೆದರು. ಅಡ್ವಾಣಿ ಜೀವನ ಅಂತಿಮ ಗುರಿಯಾಗಿರುವ ಪ್ರಧಾನಮಂತ್ರಿ ಹುದ್ದೆ ಅಲಂಕರಿಸಬೇಕಾದರೆ, ಆರ್ಎಸ್ಎಸ್ ಅಡಿಯಾಳಾಗಿ ಕೆಲಸ ಮಾಡಲೆಬೇಕು ಎಂದು ಅವರು ಕಟುಕಿದರು.
ಪಾಕಿಸ್ತಾನದ ಪ್ರವಾಸದ ಸಂದರ್ಭದಲ್ಲಿ ಮೊಹ್ಮದ್ ಅಲಿ ಜಿನ್ನಾ ಅವರನ್ನು ಜಾತ್ಯಾತೀತ ನಾಯಕ ಎಂದು ಪ್ರಶಂಸಿಸಿ ಆರ್ಎಸ್ಎಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಆಗ ಅವರ ಪರಿಸ್ಥಿತಿ ಏನಾಗಿತ್ತು ಎಂದು ಅಡ್ವಾಣಿ ನೆನಪಿಸಿಕೊಂಡರೆ ಒಲಿತು ಎಂದು ಕೆಣಕಿದರು. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವಿರುದ್ಧ ಮೇಲಿಂದ ಮೇಲೆ ಅಸಮರ್ಥ ಪ್ರಧಾನಮಂತ್ರಿ ಎಂದು ಜರಿಯುವುದು ಸರಿಯಲ್ಲ. ಅವರು ಕಾಂಗ್ರೆಸ್ ಪಕ್ಷದ ಪ್ರಧಾನಮಂತ್ರಿ ಅಲ್ಲ. ಭಾರತ ದೇಶದ ಪ್ರಧಾನಮಂತ್ರಿ ಎನ್ನುವುದನ್ನು ಅಡ್ವಾಣಿ ಮರೆಯಬಾರದು. ಮನಮೋಹನ್ ಸಿಂಗ್ ಅವರಿಗ ಅವಮಾನ ಮಾಡಿದರೆ, ಅದು ದೇಶದ ಜನತೆ ಮಾಡಿದ ಅವಮಾನವಾಗುತ್ತದೆ ಎಂದು ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.
ಭಯೋತ್ಪಾದಕರ ಬಗ್ಗೆ ಕಾಂಗ್ರೆಸ್ ಪಕ್ಷ ಮೃದುಧೋರಣೆ ತಾಳಿದೆ ಎನ್ನುವ ಟೀಕೆಯನ್ನು ಸ್ಪಷ್ಟವಾಗಿ ನಿರಾಕರಿಸಿದ ಅವರು, ಎನ್ ಡಿಎ ಸರ್ಕಾರವಿದ್ದಾಗ ಕಂದಹಾರ್ ಅಪಹರಣ ನಡೆಯಿತು. ಆಗ ಭಯೋತ್ಪಾದಕರನ್ನು ಭದ್ರತೆಯೊಂದಿಗೆ ಬಿಟ್ಟು ಬಂದವರು ಯಾರು ಎಂದು ಸೋನಿಯಾ ಪ್ರಶ್ನಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications