ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ

ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಈ ನಾಲ್ಕೂ ಮುಖಂಡರು ಚುನಾವಣೆ ಪ್ರಚಾರಕ್ಕೆ ಎಲ್ಲೆಲ್ಲಿ ಹೋಗುತ್ತಾರೆ, ಅಲ್ಲೆಲ್ಲಾ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವುದು ರೂಢಿ ಮಾಡಿಕೊಂಡಿದ್ದಾರೆ. ಅಡ್ವಾಣಿ ಕೂಡ ಮನಮೋಹನ್ ಸಿಂಗ್ ಅವರನ್ನು ಬೆನ್ನುಬಿಡದೇ ಕಾಡುತ್ತಿರುವುದು ಸುಳ್ಳಲ್ಲ. ಈ ಉಭಯ ಪಕ್ಷಗಳ ಮುಖಂಡರ ವಾಕ್ಸಮರ ಜನರಿಗೆ ಮನರಂಜನೆಯಾಗಿದೆ.
ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಆದರೆ, ತೀರಾ ವೈಯಕ್ತಿಕ ಮಟ್ಟದಲ್ಲಿ ಟೀಕಿಸುವುದು ಆರೋಗ್ಯಕಾರಿ ಬೆಳವಣಿಗೆಯಲ್ಲ. ದೇಶದ ಜ್ವಲಂತ ಸಮಸ್ಯೆಗಳು ಕಿತ್ತು ತಿನ್ನತೊಡಗಿವೆ. ಭಯೋತ್ಪಾದನೆ, ಆರ್ಥಿಕ ಕುಸಿತ, ದರ ಏರಿಕೆ, ಭದ್ರತೆ ಹಾಗೂ ಅಭಿವೃದ್ದಿ ಕುಂಠಿತ ಎಲ್ಲವೂ ದೇಶದ ಬೆಳವಣಿಗೆಗೆ ಮಾರಕವಾಗಿವೆ. ಇಂತಹ ಸಮಸ್ಯೆಗಳ ಚಿಂತನೆ ಮಾಡುವುದನ್ನು ಬಿಟ್ಟಿರುವ ಕೇಂದ್ರದ ಯುಪಿಎ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಎನ್ ಡಿಎ ಆಡಳಿತವಿದ್ದಾಗ ನಡೆದ ಕಂದಹಾರ್ ಅಪಹರಣ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ರಾಜನಾಥ್ ಸಿಂಗ್, ಭಯೋತ್ಪಾದಕರ ಬಿಡುಗಡೆ ಕುರಿತು ಅಂದಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದರು. ಸೆರೆಯಾಳುಗಳ ಬಿಡುಗಡೆಗೆ ಎಲ್ಲ ಪಕ್ಷಗಳ ನಾಯಕರಿಂದ ಒಪ್ಪಿಗೆ ಪಡೆದ ನಂತರವೇ ಭಯೋತ್ಪಾದಕರನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿತು ಎಂದು ಅವರು ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)
ಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ











Click it and Unblock the Notifications