ಕಣದಲ್ಲಿ 27 ಕ್ರಿಮಿನಲ್ ಪ್ರಕರಣದ ಅಭ್ಯರ್ಥಿಗಳು
ಬೆಂಗಳೂರು, ಏ. 15 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವವರ ಪೈಕಿ ರಾಜ್ಯದ ಮೊದಲ ಹಂತದ ಚುನಾವಣೆಯ 181 ಅಭ್ಯರ್ಥಿಗಳಲ್ಲಿ 27 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿದೆ. ಸೇಧ ವಿವಿಧ ರಾಜ್ಯಗಳಲ್ಲಿ ಅಖಾಕ್ಕಿಳಿದಿರುವ 1,425 ಅಭ್ಯರ್ಥಿಗಳ ಪೈಕಿ 222 ಹುರಿಯಾಳುಗಲು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ ಎಂಬ ಅಂಶವನ್ನು ರಾಷ್ಟ್ರೀಯ ಚುನಾವಣೆ ಕಾವಲು (ಎನ್ ಸಿಡಬ್ಲ್ಯು) ಸಂಸ್ಥೆ ಬಹಿರಂಗಪಡಿಸಿದೆ.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ತ್ರಿಲೋಚನ ಶಾಸ್ತ್ರೀ, ರಾಜಕೀಯ ಅಪರಾಧೀಕರಣ ಪ್ರಕ್ರಿಯೆ ಮುಂದುವರಿಯುತ್ತಿರುವುದು ಕಳವಳಕಾರಿಯಾದ ಸಂಗತಿ ಎಂದರು. ಇತರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಕ್ರಿಮಿನಲ್ ಅಭ್ಯರ್ಥಿಗಳ ಪ್ರಮಾಣ ಕಡಿಮೆ. ಆದರೆ 10 ಅಭ್ಯರ್ಥಿಗಳು 15 ಗಂಭೀರವಾದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇತರೆ 17 ಮಂದಿ ಸಣ್ಣಪುಟ್ಟ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಮಾಜಿ ಶಾಸಕ ವಾಟಾಳ್ ನಾಗರಾಜ್ ಮೇಲೆ 11 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಬಿಜೆಪಿ-7, ಜೆಡಿಎಸ್-5, ಕಾಂಗ್ರೆಸ್-4, ಬಿಎಸ್ಪಿ-3 ಹಾಗೂ ಪಕ್ಷೇತರರು-7 ಅಭ್ಯರ್ಥಿಗಳು ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಯ್ಕೆಯಾದ 13 ಶಾಸಕರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಒಂದೇ ವರ್ಷದಲ್ಲಿ ಈ ಎಲ್ಲ ಅಭ್ಯರ್ಥಿಗಳ ಒಟ್ಟು ಆಸ್ತಿ ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತ್ರಿಲೋಚನ ಶಾಸ್ತ್ರೀ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications