ನಟ ಸಂಜಯ್ ದತ್ ವಿರುದ್ಧ ಎಫ್ಐಆರ್

Police mistreated me because my mom was a Muslim
ಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. ಈ ಸರದಿಗೆ ಬಾಲಿವುಡ್ ನಟ, ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಜಯ್ ದತ್ ಪ್ರಚೋದನಕಾರಿ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

ಉತ್ತರ ಪ್ರದೇಶದ ಘೋಸಿ ಲೋಕಸಭೆ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಅರ್ಷದ್ ಜಮಾಲ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ನಟ ಸಂಜಯ್ ದತ್, ಮುಂಬೈ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ತಾವು ಜೈಲು ಪಾಲಾಗಿದ್ದನ್ನು ನೆನಪಿಸಿಕೊಂಡರಲ್ಲದೆ, ನನ್ನ ತಾಯಿ ಮುಸ್ಲಿಂ ಎಂಬ ಕಾರಣಕ್ಕೆ ತಮ್ಮನ್ನು ಅಲ್ಲಿನ ಪೊಲೀಸರು ಅನಾಗರಿಕತೆಯಿಂದ ನಡೆಸಿಕೊಂಡರು. ಅನಗತ್ಯವಾಗಿ ಕಿರುಕುಳ ನೀಡಿದರು ಎಂದು ಅವರು ಆರೋಪಿಸಿದ್ದಾರೆ.

ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+