ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನಟ ಸಂಜಯ್ ದತ್ ವಿರುದ್ಧ ಎಫ್ಐಆರ್
ಉತ್ತರ ಪ್ರದೇಶದ ಘೋಸಿ ಲೋಕಸಭೆ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಅರ್ಷದ್ ಜಮಾಲ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ನಟ ಸಂಜಯ್ ದತ್, ಮುಂಬೈ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ತಾವು ಜೈಲು ಪಾಲಾಗಿದ್ದನ್ನು ನೆನಪಿಸಿಕೊಂಡರಲ್ಲದೆ, ನನ್ನ ತಾಯಿ ಮುಸ್ಲಿಂ ಎಂಬ ಕಾರಣಕ್ಕೆ ತಮ್ಮನ್ನು ಅಲ್ಲಿನ ಪೊಲೀಸರು ಅನಾಗರಿಕತೆಯಿಂದ ನಡೆಸಿಕೊಂಡರು. ಅನಗತ್ಯವಾಗಿ ಕಿರುಕುಳ ನೀಡಿದರು ಎಂದು ಅವರು ಆರೋಪಿಸಿದ್ದಾರೆ.
ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
Comments
Story first published: Wednesday, April 15, 2009, 11:44 [IST]