ಏಳಿ ಏದ್ದೇಳಿ ಪರಿವರ್ತನೆಯಲ್ಲಿ ಪಾಲ್ಗೊಳ್ಳಿ!
ಬೆಂಗಳೂರು, ಏ. 16 : ಏಳಿ ಏದ್ದೇಳಿ, ಏಚ್ಚರಗೊಳ್ಳಿ, ಪರಿವರ್ತನೆಯಲ್ಲಿ ಪಾಲ್ಗೊಳ್ಳಿ..... ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕ್ಯಾಪ್ಟನ್ ಗೋಪಿನಾಥ ಅವಲರ ಘೋಷವಾಕ್ಯ. ಬದಲಾವಣೆಗಾಗಿ ಮತ ಚಲಾಯಿಸಿ ಎಂದು ನಗರದ ಲಾಲ್ ಬಾಗ್, ಬನ್ನೇರುಘಟ್ಟ ರಸ್ತೆ, ಜಯನಗರದ 4ನೇ ಹಂತ, ಜಯದೇವ ಆಸ್ಪತ್ರೆ ಆಸುಪಾಸು ಬುಧವಾರ ಅವರು ಮತಯಾಚಿಸಿದರು.
ಹಳದಿ ಟಿ ಶರ್ಟ್ ಧರಿಸಿದ್ದ ಯುವಕರು ಕರಪತ್ರ ಹಂಚುತ್ತ ನಡೆದರೆ, ಕ್ಯಾಪ್ಟನ್ ಗೋಪಿನಾಥ್ ಮತದಾನ ಪ್ರತಿಯೊಬ್ಬರ ಹಕ್ಕು ಅದನ್ನು ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡುತ್ತಿದ್ದರು. ಎಲ್ಲ ರಾಜಕೀಯ ಪಕ್ಷಗಳೂ ಜಾತಿ, ಧರ್ಮದ ಆಧಾರದ ಮೇಲೆ ಒಡೆದು ಆಳುವ ನೀತಿ ಅನುಸರಿಸುತ್ತಿವೆ. ಇಂತಹ ಕುತಂತ್ರಕ್ಕೆ ಬಲಿಯಾಗಬೇಡಿ. ನಿಮ್ಮ ಮತವನ್ನು ಹಣ, ಹೆಂಡ, ಜಾತಿಗೆ ಮಾರಿಕೊಳ್ಳುವುದು ಬೇಡಿ ಎಂದು ಹೇಳುತ್ತಿದ್ದರು.
ಉತ್ತಮ ಸಮಾಜಕ್ಕೆ ಸೌಹಾರ್ದ ಮುಖ್ಯ. ಕೋಮುವಾದಿಗಳು, ಜಾತಿವಾದಿಗಳು ಸಾಮರಸ್ಯ ಕದಡುತ್ತಿರುವುದು ನಿಮಗೆ ಗೊತ್ತಿಲ್ಲವೇ ಎಂದು ಮತದಾರರನ್ನೇ ಅವರು ಪ್ರಶ್ನಿಸುತ್ತಿದ್ದರು. ಭಯೋತ್ಪಾದನೆ ಮನೆ ಬಾಗಿಲಿಗೆ ಬಂದು ನಿಂತಿದೆ. ಚಾಕು, ಚೂರಿ, ಸಂಸ್ಕಡತಿ ಬೇಕೆ, ಯೋಚಿಸಿ. ಮತದಾನದ ದಿನದಂದು ರಜೆ ಸಿಗುತ್ತದೆಂದು ಪಿಕ್ ನಿಕ್ ಹೋಗಬೇಡಿ. ತಪ್ಪದೇ ಮತ ಹಾಕಬೇಕು. ಮತ ಹಾಕುವ ಮುನ್ನ ಯೋಚಿಸಿ ಎಂದು ಗೋಪಿನಾಥ್ ಸಲಹೆ ನೀಡುತ್ತಿರುವ ದೃಶ್ಯ ಅವರ ಮತಯಾಚನೆ ಉದ್ದಕ್ಕೂ ಕಂಡುಬಂದಿತು.
(ದಟ್ಸ್ ಕನ್ನಡ ವಾರ್ತೆ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications