4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ

ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ ಲೋಕಸಭೆ ಕ್ಷೇತ್ರದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 4ನೇ ರಂಗದಿಂದ ಮತಗಳ ವಿಂಗಡಣೆ ಆಗುವ ಸಾಧ್ಯತೆಯೇ ಹೆಚ್ಚು ಎಂದು ಅಭಿಪ್ರಾಯಪಟ್ಟರು. ದೇಶಾದ್ಯಂತ ಕಾಂಗ್ರೆಸ್ ಪಕ್ಷ ಸ್ಪರ್ಧಿಗಿಳಿದಿದ್ದು, ಅತೀ ಹೆಚ್ಚು ಸ್ಥಾನ ಗಳಿಸಲಿದೆ ಎಂಬ ಆಶಾವಾದವನ್ನು ವ್ಯಕ್ತಪಡಿಸಿದರು. ಅತೀ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಅದರಲ್ಲಿ ಅನುಮಾನವೇ ಬೇಡ. ಕಳೆದ ಐದು ವರ್ಷದಲ್ಲಿ ಮನಮೋಹನ್ ನೇತೃತ್ವದ ಸರ್ಕಾರ ಮಾಡಿರುವ ಅಮೂಲ್ಯ ಸಾಧನೆಯೇ ನಮಗೆ ಶ್ರೀರಕ್ಷೆ ಎಂದು ಮುಖರ್ಜಿ ಹೇಳಿದರು.
ಕಾಂಗ್ರೆಸ್ ಪಕ್ಷ ಎಷ್ಟು ಸ್ಥಾನ ಗಳಿಸಲಿದೆ ಎಂದು ನಿಖರವಾಗಿ ಹೇಳಲು ಇಚ್ಚಿಸುವುದಿಲ್ಲ. ಅಲ್ಲದೇ ಕಾಂಗ್ರೆಸ್ ಪಕ್ಷ ಡಿಎಂಕೆ, ತೃಣಮೂಲ ಕಾಂಗ್ರೆಸ್, ಎನ್ ಸಿಪಿ, ಜಾರ್ಖಂಡ್ ಮುಕ್ತಿ ಮೋರ್ಚಾ ಸೇರಿದಂತೆ ಅನೇಕ ಪಕ್ಷಗಳೊಂದಿಗೆ ಚುನಾವಣೆ ಹೊಂದಾಣಿಕೆ ಮಾಡಿಕೊಂಡಿದೆ. ಸರ್ಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾ ಬಲ ಕಾಂಗ್ರೆಸ್ ಗೆ ದೊರೆಯಲಿದೆ. ಅದರಲ್ಲಿ ಸಂಶಯವೇ ಬೇಡ ಎಂದು ಹೇಳಿದರು. ಸಮಾಜವಾದಿ ಪಕ್ಷ, ಆರ್ ಜೆಡಿ ಮತ್ತು ಎಲ್ ಜೆಪಿ ನಾಲ್ಕನೇ ರಂಗ ರಚಿಸಿಕೊಂಡರೂ ಜಾತ್ಯಾತೀತ ಸರ್ಕಾರ ರಚನೆ ಮಾಡಲು ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಲಿವೆ ಎಂದು ಮುಖರ್ಜಿ ಹೇಳಿದರು.
(ಏಜೆನ್ಸೀಸ್)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications