ದೇವೇಗೌಡರು ಜನತೆ ಕ್ಷಮೆ ಕೇಳಲಿ : ಸಿದ್ದು
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಮಕ್ಕಳ ಮೇಲಿರುವ ಧೃತರಾಷ್ಟ್ರ ಪ್ರೀತಿಯಿಂದಾಗಿ ಇಂದು ರಾಜ್ಯ ಅಪಾಯದ ಮಟ್ಟಕ್ಕೆ ಬಂದು ತಲುಪಿದೆ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದ 10 ತಿಂಗಳು ಆಗಿದೆ. ಅವರ ಸಾಧನೆ ಏನು ಎಂದರೆ ಅಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರಿಗೆ ಅಧಿಕಾರದ ಅಸೆ-ಅಮಿಷಗಳನ್ನು ಒಡ್ಡಿ ಪಕ್ಷಕ್ಕೆ ಸೆಳೆದುಕೊಂಡಿರುವುದು ಬಹುದೊಡ್ಡ ಸಾಧನೆ ಎಂದು ಟೀಕಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವೇ ಇಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಯಡಿಯೂರಪ್ಪ ಅವರ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು. ಬಿಜೆಪಿ ನಡೆಸಿದ ಅಪರೇಷನ್ ಕಮಲ ಅವರಿಗೆ ಮುಳುವಾಗಲಿದೆ. ಅವರ ಖುರ್ಚಿ ಅಲುಗಾಡುತ್ತಿದೆ. ಈಗಾಗಲೇ ಬಳ್ಳಾರಿ ಸಚಿವರಿಗೆ ಯಡಿಯೂರಪ್ಪ ಬೇಡವಾಗಿದ್ದಾರೆ. ಯಾವ ಸಂದರ್ಭದಲ್ಲಿ ಬೇಕಾದರೂ ಬಿಜೆಪಿ ಸರ್ಕಾರವನ್ನು ಅವರು ಬೀಳಸಬಹುದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು