ಬಿಜೆಪಿ ಶ್ರೀಮಂತರ ಪಕ್ಷ : ರಾಹುಲ್ ಗಾಂಧಿ
ಬೀದರ್, ಗುಲ್ಬರ್ಗಾ, ಏ. 17 : ಭಾರತೀಯ ಜನತಾ ಪಕ್ಷ ಉಳ್ಳವರ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಭಾಜಪ ಕೇಂದ್ರ ಸರ್ಕಾರದ ಅನುದಾನ ಪಡೆದುಕೊಂಡು ಜನಪರ ಯೋಜನೆಗಳನ್ನು ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಆರೋಪಿಸಿದರು.
ಬೀದರ್ ಹಾಗೂ ಗುಲ್ಬರ್ಗಾ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಧರಂಸಿಂಗ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪರ ಪ್ರಚಾರ ಸಭೆ ನಡೆಸಿದ ಅವರು, ಬಿಜೆಪಿ ಕಾರ್ಯ ವೈಖರಿ ವಿರುದ್ದ ವಾಗ್ದಾಳಿ ನಡೆಸಿದರು. ಸಾವಿರಾರು ಕೋಟಿ ರುಪಾಯಿಗಳನ್ನು ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರ, ರಾಜ್ಯ ಅಭಿವೃದ್ಧಿ ಬಳಸದಿರುವುದು ದುರದೃಷ್ಟಕರ ಸಂಗತಿ ಎಂದು ದೂರಿದ ಅವರು, ಕಾಂಗ್ರೆಸ್ ಆಡಳಿತದಲ್ಲಿರುವ ಎಲ್ಲ ರಾಜ್ಯಗಳಲ್ಲಿ ಕೇಂದ್ರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅನೇಕ ಜನಪರ ಯೋಜನೆಗಳನ್ನು ರೂಪಿಸಿವೆ ಎಂದು ಹೇಳಿದರು.
ಪಕ್ಕದ ಆಂಧ್ರಪ್ರದೇಶದಲ್ಲಿ ಅಲ್ಲಿನ ಸರ್ಕಾರ ಕೇಂದ್ರದ ಅನುದಾನ ಪಡೆದುಕೊಂಡು ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ, ಇಲ್ಲಿರುವ ಬಿಜೆಪಿ ಸರ್ಕಾರಕ್ಕೆ ಏನಾಗಿದೆ ಎಂದು ಪ್ರಶ್ನಿಸಿದ ರಾಹುಲ್, ಬಿಜೆಪಿ ಮುಖಂಡರಿಗೆ ಅಭಿವೃದ್ಧಿ ಬೇಕಿಲ್ಲ, ಶಾಂತಿ ಬೇಕಿಲ್ಲ ಎಂದು ಕಿಚಾಯಿಸಿದರು. ಬಿಜೆಪಿ ಶ್ರೀಮಂತರ ಪಕ್ಷ ಎಂದು ಲೇವಡಿ ಮಾಡಿದ ಅವರು, ಬಡವರನ್ನು ಕೈಬಿಟ್ಟ ಬಿಜೆಪಿ ಬಹುದೂರ ಸಾಗಿದೆ. ಆದ್ದರಿಂದ ಮತದಾರರೇ ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಎಂದು ಮನವಿ ಮಾಡಿಕೊಂಡರು.
ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಯೋಜನೆ ಮತ್ತು ಸೆಕ್ಷನ್ 371 ಜಾರಿಗೆ ತರಲು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಆಧ್ಯತೆ ನೀಡಲಿದೆ ಎಂದು ಭರವಸೆ ನೀಡಿದ ರಾಹುಲ್ ಗಾಂಧಿ, ಈ ಭಾಗದ ಅಭಿವೃದ್ಧಿಗೆ ಸಕಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications