ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಿಂದ ರಾತ್ರಿ ಗಸ್ತು
ಬೆಳಗಾವಿ, ಏ. 17 : ರಾತ್ರಿ ವೇಳೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ|| ಜೆ.ರವಿಶಂಕರ ಹಾಗೂ ಚುನಾವಣಾ ವೀಕ್ಷಕರು ಗುರುವಾರ ರಾತ್ರಿಯಿಂದ ರಾತ್ರಿ ಗಸ್ತು ಆರಂಭಿಸಿದ್ದಾರೆ.
ನಿನ್ನೆ ರಾತ್ರಿ ಜಿಲ್ಲಾಧಿಕಾರಿ ರವಿಶಂಕರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಿಯಾ ನಾರಂಗ ಹಾಗೂ ಚುನಾವಣಾ ವೀಕ್ಷಕರಾದ ರಾಹುಲ ಭಂಡಾರಿ, ಅಶೋಕ ಕುಮಾರ, ಎಸ್.ಎನ್. ಪಾರವಾಲ ಮತ್ತು ಜಿಲ್ಲಾಧಿಕಾರಿಗಳ ಕೇಂದ್ರಸ್ಥಾನ ಸಹಾಯಕರಾದ ಡಾ|| ವಿಜಯಕುಮಾರ ತೋರಗಲ ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಹಾಗೂ ಇತರೆ ತಾಲೂಕುಗಳಲ್ಲಿ ರಾತ್ರಿ ಗಸ್ತು ನಡೆಸಿದ್ದಾರೆ.
ಬೆಳಗಾವಿ ನಗರದ ಉದ್ಯಮಬಾಗ, ಅನಗೋಳ, ವಡಗಾಂವ, ಧಾಮಣಿ, ಯಳ್ಳೂರ, ಆಂಜನೇಯ ನಗರ, ರುಕ್ಮೀಣಿನಗರ, ವಂಟಮೂರಿ ಕಾಲನಿ, ಗ್ಯಾಂಗವಾಡಿಗಳಲ್ಲಿ ಗಸ್ತು ನಡೆಸಿದರು. ಈ ಸಂದರ್ಭದಲ್ಲಿ ನಿಗದಿತ ಅವಧಿ ನಂತರ ವ್ಯಾಪಾರ ನಡೆಸುತ್ತಿದ್ದ ಲಕ್ಷ್ಮೀ ವೈನ್ಸ್ ಅಂಗಡಿಯನ್ನು ಸೀಜ್ ಮಾಡಿಸಿದರು.
ನಂತರ ಈ ತಂಡವು ಯರಗಟ್ಟಿ, ಗೋಕಾಕ, ಘಟಪ್ರಭಾ ಹಾಗೂ ಹುಕ್ಕೇರಿಗಳಿಗೆ ಭೇಟಿ ನೀಡಿತ್ತು. ಹೆದ್ದಾರಿಯಲ್ಲಿ ಟ್ಯಾಂಕರ್ ಮತ್ತು ಕೆಲವು ಲಾರಿಗಳನ್ನು ಸಹ ಪರಿಶೀಲಿಸಲಾಯಿತು. ಯಳ್ಳೂರ ನಾಕಾ ಹತ್ತಿರ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪೊಲೀಸ್ ಕಾನಸ್ಟೇಬಲ್ ಐನಾಪೂರ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಿಯಾ ನಾರಂಗ ಅವರು ಅಮಾನತುಗೊಳಿಸಿದರು.
ಮಹಾನಗರ ಸಭೆಯ ಇಂಜನೀಯರರಾದ ಹಿರೇಮಠ ಅವರ ನೇತೃತ್ವದ ತಂಡವು ನಿನ್ನೆ ರಾತ್ರಿ ಬಿಯರ್ ಬಾಕ್ಸ್ಗಳನ್ನು ಹೊಂದಿದ್ದ ಲಾರಿಗಳನ್ನು ತಡೆ ಹಿಡಿದಿದು, ಬಿಯರಿನ ಸಾಗಾಣಿಕೆ ಕುರಿತು ಸೂಕ್ತ ದಾಖಲಾತಿಗಳು ಇದ್ದಿದ್ದರಿಂದ ನಂತರ ಈ ಲಾರಿಗಳನ್ನು ಅಬಕಾರಿ ಅಧಿಕಾರಿಗಳು ಬಿಡುಗಡೆಗೊಳಿಸಿದರು.
ಈ ಗಸ್ತು ಕಾರ್ಯವು ಚುನಾವಣೆ ಮುಗಿಯುವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ರವಿಶಂಕರ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications