ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್

ಹತ್ತು ಸಾವಿರದಿಂದ 1.8 ಬಿಲಿಯನ್ ಡಾಲರ್ ಸಂಪತ್ತಿನ ಒಡೆಯರಾಗಿರುವ ನಾರಾಯಣ ಮೂರ್ತಿಯವರು 'ಕೆರೆಯ ನೀರನು ಕೆರೆಗೆ ಚೆಲ್ಲಿ' ಎಂಬಂತೆ ಹೊಸ ವಿಚಾರಧಾರೆ ಹೊಂದಿರುವ ಕಂಪನಿಗಳಲ್ಲಿ ಹಣ ಹೂಡುವ ಸಲುವಾಗಿ ನಿಧಿಯನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ.
ಎಕಾನಾಮಿಕ್ಸ್ ಟೈಮ್ಸ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ, ಕಂಪ್ಯೂಟರ್ ಮತ್ತು ಹೈಟೆಕ್ ಉದ್ಯಮದ ಹೊರತಾಗಿಯೂ ಅನೇಕ ಉದ್ಯಮಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಪತ್ತೆಹಚ್ಚಿ ಅವುಗಳಲ್ಲಿ ತೊಡಗಿಕೊಳ್ಳಲು ಯುವಕರಿಗೆ ಉತ್ತೇಜನ ನೀಡುವ ಕಾರ್ಯ ಆಗಬೇಕು ಎಂದು ಹೇಳಿದ್ದಾರೆ. ಗ್ರಾಮೀಣ ಕ್ಷೇತ್ರವನ್ನು ಉದ್ಧಾರ ಮಾಡುವಂಥ ಯೋಜನೆಗಳಿಗೆ ಪ್ರೋತ್ಸಾಹ ನೀಡಬೇಕು ಮತ್ತು ನಗರದ ಬಡ ಯುವಕರಿಗೆ ಮಾರ್ಗದರ್ಶಿಯಾಗಿ ಸರಿಯಾದ ಉದ್ಯಮದಲ್ಲಿ ಬಂಡವಾಳ ಹೂಡುವಂತಾಗಬೇಕು ಎಂದು ತಿಳಿಸಿದ್ದಾರೆ.
ಇಂದಿನ ಯುವಪಡೆಯಲ್ಲಿ ಕನಸುಗಳಿಗೆ, ಅವುಗಳನ್ನು ಸಾಕಾರ ಮಾಡಿಕೊಳ್ಳಲು ಅಗತ್ಯವಿರುವ ಮನೋಸ್ಥೈರ್ಯವಿದೆ ಮತ್ತು ಕಾರ್ಯದಕ್ಷತೆಯನ್ನು ಸದುಪಯೋಗಪಡಿಸಿ ಉತ್ಪಾದನೆ ಹೆಚ್ಚಿಸುವ ಸಾಮರ್ಥ್ಯವಿದೆ. ಅಂಥವರಿಗೆ ಸಹಾಯಹಸ್ತ ಚಾಚಿ ಅವರನ್ನು ಯಶಸ್ವಿ ಉದ್ಯಮಿಗಳನ್ನಾಗಿ ಪರಿವರ್ತಿಸಲು ಸಿದ್ಧನಿದ್ದೇನೆ ಎಂದು ಯುವಜನತೆಯಲ್ಲಿ ಕನಸನ್ನು ಬಿತ್ತಿದ್ದಾರೆ. ಈ ಹಣಹೂಡಿಕೆ ನಿಧಿಯ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ.
ತಮ್ಮ ಮಕ್ಕಳಾದ ರೋಹನ್ ಮತ್ತು ಅಕ್ಷತಾ ಅವರು ಕೂಡ ಇನ್ಫೋಸಿಸ್ ಸೇರುವ ಸಾಧ್ಯತೆಯನ್ನು ಮೂರ್ತಿ ತಳ್ಳಿಹಾಕಲಿಲ್ಲ. ಅಕ್ಷತಾ ಸ್ಟಾನ್ ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪಡೆದಿದ್ದಾರೆ. ರೋಹನ್ ಹಾರ್ವರ್ಡ್ ನಲ್ಲಿ ಪಿಎಚ್ ಡಿ ಮಾಡುತ್ತಿದ್ದಾರೆ. ಅವರಿಬ್ಬರೂ ಶೈಕ್ಷಣಿಕವಾಗಿ ಸಾಕಷ್ಟು ಸಾಧಿಸಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ.
ಸದ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಮಾತನಾಡಿದ ಅವರು, ಸಂಕಷ್ಟಮಯ 2009ರ ಮುಗಿದ ಮೇಲೆ 2010ರ ಮಾರ್ಚ್ ನಂತರ ಭಾರತ ಆರ್ಥಿಕ ಪರಿಸ್ಥಿತಿ, ಅದರಲ್ಲೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಅಲ್ಲಿಯತನಕ ಹೊಸ ಕಂಪನಿಗಳಲ್ಲಿ ಬಂಡವಾಳ ಹೂಡುವ ನೂತನ ಯೋಜನೆಗೆ ಮೂರ್ತರೂಪ ದೊರೆಯಲಿದೆ.
ನಾರಾಯಣ ಮೂರ್ತಿಯವರಲ್ಲದೆ, ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್ ಜಿ, ಮೂರ್ತಿಯವರ ಮಾಜಿ ಸಹೋದ್ಯೋಗಿ ಎನ್ಎಸ್ ರಾಘವನ್, ಸನ್ ಮೈಕ್ರೋಸಿಸ್ಟಂಸ್ ಸ್ಥಾಪಿಸಿರುವ ಭಾರತೀಯ ವಿನೋದ್ ಖೋಸ್ಲಾ ಕೂಡ ವೆಂಚರ್ ಫಂಡ್ ಸ್ಥಾಪಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications