ಕರ್ತವ್ಯ ಲೋಪ : ಬಿಇಒ ಅಮಾನತು
ಬೀದರ್, ಏ . 19 : ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯದಿಂದಾಗಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ವಿಫಲವಾಗಿರುವ ಆರೋಪದ ಹಿನ್ನೆಲೆಯಲ್ಲಿ ಔರಾದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಹನುಮಂತಪ್ಪ ಅವರನ್ನು ಸರ್ಕಾರ ಸೇವೆಯಿಂದ ಅಮಾನತು ಮಾಡಿದೆ.
ಮಾರ್ಚ್ 31ರಂದು ಔರಾದ್ ತಾಲೂಕಿನ ಪರೀಕ್ಷಾ ಕೇಂದ್ರಕ್ಕೆ ಔರಾದ ತಹಶೀಲ್ದಾರ್ ಅವರು ಭೇಟಿ ನೀಡಿದ ಸಂದರ್ಭದಲ್ಲಿ, ನಾಲ್ಕು ಅಡಿ ಉದ್ದದ ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ನೀಡಿರುವುದು ಕಂಡು ಬಂದಿತ್ತು. ಇದರಿಂದಾಗಿ ನಕಲು ಮಾಡಲು ಅವಕಾಶ ಮಾಡಿದಂತಾಗಿದ್ದು, ಇದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೇರ ಹೊಣೆಯಾಗಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಗುಲ್ಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿತ್ತು. ವಿಭಾಗೀಯ ಆಯುಕ್ತರ ಶಿಫಾರಸ್ಸಿನ ಮೇರೆಗೆ ಸರ್ಕಾರ ಸದರಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications