ರಾಯಚೂರು, ಬೀದರಿನಲ್ಲಿ ಅಕ್ರಮ ಮದ್ಯ ವಶ
ರಾಯಚೂರು, ಏ. 19 : ಲೋಕಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯವರು ಜಂಟಿಯಾಗಿ, ಜಿಲ್ಲೆಯ ಹೊರಗಡೆಯಿಂದ ಮದ್ಯ, ಮತ್ತಿತರ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಬಹುದಾದಂತ ವಸ್ತುಗಳು ಒಳಗಡೆ ನುಸುಳದಂತೆ ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆದಿದ್ದಾರೆ.
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಚೆಕ್ಪೋಸ್ಟ್ನಲ್ಲಿ ಏಪ್ರಿಲ್ 17 ರಂದು ಬೆಂಗಳೂರು ಕಡೆಯಿಂದ ಬಂದ ಕೆಎ 52, 3090 ಲಾರಿಯಲ್ಲಿದ್ದ 14.74 ಲಕ್ಷ ರೂ ಮೌಲ್ಯದ ಮದ್ಯದ ಪೆಟ್ಟಿಗೆಗಳು ಹಾಗೂ 6 ಲಕ್ಷ ರೂ ಮೌಲ್ಯದ ವಾಹನ ಸೇರಿದಂತೆ 20.74 ಲಕ್ಷ ರೂ ಗಳನ್ನು ಸಮರ್ಪಕ ದಾಖಲೆ ಇಲ್ಲದ ಕಾರಣ ವಶಪಡಿಸಿಕೊಂಡಿದ್ದು, ಇಬ್ಬರು ವಾಹನ ಚಾಲಕರನನ್ನು ಬಂದಿಸಿ ಮಾನ್ವಿ ವಲಯ ನಿರೀಕ್ಷಕರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ ಹಾಗೂ ಸದರಿ ಪ್ರಕರಣವು ತನಿಖೆಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು ಮತ್ತು ಜಿಲ್ಲಾಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಅನಧಿಕೃತ ಮದ್ಯ ಸಾಗಾಣೆ ಲಾರಿ ಸಮೇತ ಮದ್ಯ ವಶ
ಬೀದರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಧರಂಸಿಂಗ್ ಅವರಿಗೆ ಸೇರಿದ ವಾಹನದಿಂದ 9,17ಲಕ್ಷ ರುಪಾಯಿ ಹಣವನ್ನು ಶನಿವಾರ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಧ್ಯಾಹ್ನ 2 ಗಂಟೆಯ ವೇಳೆಗೆ ನಗರದ ಚಿಟ್ಟಾ ಬಳಿ ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಅವರು ಗುಲ್ಬರ್ಗಾದ ನೀಲಕಂಠಪ್ಪ ಮೂಲಗೆ ಎಂಬವರಿಗೆ ಸೇರಿದ ಕೆಎ 32 ಎಂ ಬಿ 29 ವಾಹನವನ್ನು ನಿಲ್ಲಿಸಿ ಪರಿಶೋಧನೆ ನಡೆಸಿದಾಗ ಲಕೋಟೆಗಳಲ್ಲಿ ಹಂಚಲು ಸಿದ್ಧಪಡಿಸಲಾಗಿದ್ದ ಹಣ ಪತ್ತೆಯಾಗಿದೆ. ವಾಹನದಲ್ಲಿ ಇದ್ದ ಮೂವರು ಪರಾರಿಯಾಗಿದ್ದು, ಚಾಲಕನನ್ನು ಹಿಡಿಯಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಹಂಚಲು ತರಲಾಗುತ್ತಿದ್ದ ಹಣ ಇದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ವಾಹನದಲ್ಲಿ ಇತರ ದಾಖಲೆಗಳು ಸಹ ಪತ್ತೆಯಾಗಿದ್ದು, ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹರ್ಷಗುಪ್ತಾ ಅವರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಧರಂಗೆ ಸೇರಿದ 10 ಲಕ್ಷ ರು. ನಗದು ವಶ!
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications