ಬಿಜೆಪಿಗೆ ಮುಸ್ಲಿಂ ಸಂಘಟನೆ ಬೆಂಬಲ
ಬೆಂಗಳೂರು, ಏ. 19 : ಕೋಮುವಾದಿ ಎಂಬ ಪಟ್ಟಕಟ್ಟಿಕೊಂಡಿರುವ ಬಿಜೆಪಿ ಪಕ್ಷಕ್ಕೆ ಅಲ್ಪಸಂಖ್ಯಾತರು ದೂರದೂರ ಎನ್ನುವ ಮಾತು ಈ ಹೊತ್ತಿಗೂ ಚಾಲ್ತಿಯಲ್ಲಿದೆ. ಆದರೆ, ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಮುಸ್ಲಿಂ ಸಂಘಟನೆಯೊಂದು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಬೆಂಬಲ ಘೋಷಿಸಿರುವುದು ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಕಾರಣವಾಗಿದೆ.
ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಅನೇಕ ಘಟಾನುಘಟಿ ಮುಖಂಡರು ಅಲ್ಪಸಂಖ್ಯಾತರ ವಿಷಯವನ್ನು ಮುಂದಿಟ್ಟುಕೊಂಡು ಮತ ಪಡೆದಿರುವುದು, ಹಾಗೂ ಪಡೆಯುತ್ತಿರುವುದು ಗೊತ್ತಿರುವ ಸಂಗತಿ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ಮುಸ್ಲಿಂ ಸಂಘರ್ಷ ಸಮಿತಿ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಮಿತಿ ಅಧ್ಯಕ್ಷ ಎಂ ಜೆ ಅಲಿ, ಕರ್ನಾಟಕ ಮುಸ್ಲಿಂ ಸಂಘರ್ಷ ಸಮಿತಿಯ ಕಾರ್ಯಕಾರಿ ಸಭೆಯಲ್ಲಿ ಬಿಜೆಪಿ ಬೆಂಬಲ ನೀಡುವ ಮಹತ್ವದ ವಿಷಯವನ್ನು ಚರ್ಚಿಸಲಾಗಿದೆ. ಡೋಂಗಿ ಜಾತ್ಯಾತೀತವಾದಿಗಳು ನಮ್ಮ ಮತಗಳನ್ನು ಪಡೆಯುತ್ತಾರೆ, ಹೊರೆತು ಯಾವ ಸೌಲಭ್ಯವನ್ನು ನೀಡಿಲ್ಲ. ಇದರಿಂದ ಬೇಸತ್ತು ಸಮಿತಿ ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಲು ಸರ್ವಾನುಮಚದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಲಿ ವಿವರಿಸಿದರು.
ಅಲ್ಪಸಂಖ್ಯಾತರ ಏಳಿಗೆ ಬಿಜೆಪಿ ಸರ್ಕಾರ ಶ್ರಮಿಸುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಈಗಾಗಲೇ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 170 ಕೋಟಿ ರುಪಾಯಿಯನ್ನು ತನ್ನ ಬಜೆಟ್ ನಲ್ಲಿ ಮೀಸರಿಸಿದೆ. ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ನೀಡಿರುವ ಸರ್ಕಾರ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಡೋಂಗಿ ನಾಯಕರ ತಿರಸ್ಕರಿಸಿ ಅಲ್ಪಸಂಖ್ಯಾತರ ಪರವಾಗಿ ಪ್ರಮಾಣಿಕವಾಗಿ ಕಾಳಜಿ ವಹಿಸುವ ಪಕ್ಷ ಹಾಗೂ ನಾಯಕರಿಗೆ ಮಣಿ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಲಿ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications