ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ
ಬಿಹಾರ ದರ್ಭಾಂಗ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, 1992 ರಲ್ಲಿ ಬಾಬ್ರಿ ಮಸೀದಿ ಕಟ್ಟಡ ಕೆಡವಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೂ ಮಸೀದಿಯನ್ನು ಆಗಲಿಲ್ಲ ಎದು ಹೇಳಿದ್ದಾರೆ. ಲಾಲು ಅವರ ಆರೋಪಕ್ಕೆ ಪ್ರತಿಕ್ರಿಯಿ ನೀಡಿರುವ ಕಾಂಗ್ರೆಸ್ ಸ ಮುಖಂಡ, ಕೇಂದ್ರ ಸಚಿವ ವಯಲಾರ್ ರವಿ ಅವರು ಲಾಲು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿದಿಲ್ಲ. ಈ ಶೈಲಿಯ ಹೇಳಿಕೆಯನ್ನು ಅವರಿಂದ ನಿರೀಕ್ಷಿಸರಿಲಿಲ್ಲ. ಲಾಲು ಮತ್ತು ಇತರರು ಕಾಂಗ್ರೆಸ್ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಲಾಲು ಪ್ರಸಾದ್ ಯಾದವ್ ಕೇಂದ್ರ ಸಚಿವರಾಗಿದ್ದರೂ ಕಾಂಗ್ರೆಸ್ ಮೇಲಿನ ವಾಗ್ದಾಳಿ ನಡೆಸುತ್ತಿರುವುದನ್ನು ಬಿಡುತ್ತಿಲ್ಲ. ಇತ್ತೀಚೆಗೆ ಅವರು ಪ್ರಚಾದನಕಾರಿ ಹೇಳಿಕೆ ನೀಡಿರುವ ವರುಣ್ ಗಾಂಧಿ ಮೇಲೆ ರೋಲರ್ ಹತ್ತಿಸಬೇಕು ಎಂಬ ವಿವಾದದ ಹೇಳಿಕೆ ನೀಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು