ರಾಹುಲ್ ಕ್ಷಮೆ ಕೇಳಲಿ, ಯಡಿಯೂರಪ್ಪ

ಇತ್ತೀಚೆಗೆ ರಾಜ್ಯ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ರಾಹುಲ್ ಗಾಂಧಿ ಬಿಜೆಪಿ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಅಭಿವೃದ್ಧಿ ಬಗ್ಗೆ ಬಿಜೆಪಿ ಸರ್ಕಾರ ಕಿಂಚತ್ತು ಕಾಳಜಿ ವಹಿಸಿಲ್ಲ ಎಂದು ಹೇಳಿಕೆ ನೀಡಿರುವ ಬೇಜವಾಬ್ದಾರಿಯ ವರ್ತನೆ ಎಂದು ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಎಲುಬು ಇಲ್ಲದ ನಾಲಿಗೆ ಎಂದು ಏನು ಬೇಕಾದರೂ ಮಾತನಾಡಿದರೆ ನಡೆಯುತ್ತೆ ಎಂದು ಭಾವಿಸಿದರೆ ತಪ್ಪಲ್ಲವೇ ಎಂದು ಪ್ರಶ್ನಿಸಿದರು. 50 ವರ್ಷಗಳಿಂದ ಏನೂ ಮಾಡದ ಕಾಂಗ್ರಸ್ ಗೆ ಇದೀಗ ಭಾರತ್ ನಿರ್ಮಾಣ ಮಾಡುವ ಭರವಸೆ ನೀಡುತ್ತಿರುವುದು ಹಾಸ್ಯಾಸ್ಪದ ಸಂಗತಿ ಎಂದು ಲೇವಡಿ ಮಾಡಿದರು.
ಬೆಂಗಳೂರು ಅಭಿವೃದ್ಧಿಗೆ 11 ಸಾವಿರ ಕೋಟಿ ರುಪಾಯಿ ನೀಡಿದ್ದು, ಬಿಜೆಪಿ ಅದನ್ನು ಸಮರ್ಪಕವಾಗಿ ಬಳಸಿಲ್ಲ. ಈ ಬಾರಿ ಮತ್ತೆ ನೀಡುತ್ತೇವೆ. ಅದು ಮತ್ತೆ ಮಾಯವಾಗಬಹುದು ಎಂದಿರುವ ರಾಹುಲ್ ಗಾಂಧಿ, ಬಿಜೆಪಿ ಅಧಿಕಾರಕ್ಕೆ ಬಂದ ತಿಂಗಳಲ್ಲಿ ಮಾಡಿರುವ ಸಾಧನೆ, ಕಾರ್ಯಗತಗೊಳಿಸಿದ ಯೋಜನೆಗಳನ್ನು ಒಂದು ಸಾರಿ ಬಂದು ನೋಡಲಿ ಎಂದು ಯಡಿಯೂರಪ್ಪ ಸವಾಲು ಹಾಕಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು











Click it and Unblock the Notifications