Get Updates
Get notified of breaking news, exclusive insights, and must-see stories!

ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್

After Lalu, Paswan blames Cong for Babri demolition
ಪಾಟ್ನಾ, ಏ. 20 : 1992ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಾಲೂ ಇದೆ ಎಂದು ಹೇಳಿಕೆ ನೀಡಿರುವ ಲಾಲು ಪ್ರಸಾದ ಯಾದವ್ ಮಾತನ್ನು ಸಮರ್ಥಿಸಿಕೊಂಡಿರುವ ಲೋಕಜನ ಶಕ್ತಿ ಪಕ್ಷದ ರಾಂವಿಲಾಸ್ ಪಾಸ್ವಾನ್, ಲಾಲು ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಹಾಜೀಪುರ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಸ್ವಾನ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಾಜೀಪುರ್ ಕ್ಷೇತ್ರದಲ್ಲಿ ತಮ್ಮ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಪಾಸ್ವಾನ್, ಕಾಂಗ್ರೆಸ್ ಗೆ ಎಷ್ಟು ಮತಗಳು ದೊರೆಯಲಿವೆ. 2 ಸಾವಿರ ಮತಗಳನ್ನು ಪಡೆಯಲು ಸಾಮರ್ಥ್ಯವಿಲ್ಲದ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸುವ ಉದ್ದೇಶವಾದರೂ ಏನೂ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಪಾಲೂ ಇದೆ ಎಂದು ಹೇಳಿರುವ ಲಾಲು ಅವರ ಮಾತನ್ನು ಸಮರ್ಥಿಸಿಕೊಂಡ ಅವರು ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದರು. 1992 ರಲ್ಲಿ ಕಾಂಗ್ರೆಸ್ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. ಧ್ವಂಸ ಮಾಡುತ್ತಿರುವಾಗ ಏನು ಮಾಡಿತು. ಇದರಲ್ಲಿ ಕಾಂಗ್ರೆಸ್ ಪಕ್ಷದ ಕರಾಮತ್ತೂ ಕೂಡಾ ಇದೆ ಎಂದು ಪಾಸ್ವಾನ್ ಆರೋಪಿಸಿದರು.

ಬಿಹಾರದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಕಡಿದುಕೊಂಡಿರುವ ಲಾಲು, ಪಾಸ್ವಾನ್ ಹಾಗೂ ಅಮರ್ ಸಿಂಗ್ ಈ ಮೂವರು ಸೇರಿಕೊಂಡು ನಾಲ್ಕನೇ ರಂಗ ಸ್ಥಾಪನೆ ಮಾಡಿಕೊಂಡಿದ್ದಾರೆ. ಈ ಮೂರು ಪಕ್ಷಗಳ ನಾಲ್ಕನೇ ರಂಗ ಒಟ್ಟು 120 ಕ್ಷೇತ್ರಗಳಲ್ಲಿ ಸ್ಪರ್ಧಿಗಿಳಿದಿದೆ. ಗೆಲ್ಲುವ ಸಾಮರ್ಥ್ಯವಿಲ್ಲದ ಕಾಂಗ್ರೆಸ್ ಪಕ್ಷ ತಮ್ಮ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಈ ಮೂರು ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಯುಪಿಎ ಸರ್ಕಾರದಲ್ಲಿ ಐದು ವರ್ಷ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಲು ಕಾಂಗ್ರೆಸ್ ಪಕ್ಷವೇ ಎನ್ನುವುದನ್ನು ಮರೆತಿರುವ ಲಾಲು, ಮತ ಪಡೆಯುವ ಏಕೈಕ ಉದ್ದೇಶದಿಂದ ಉಂಡ ಮನೆಗೆ ದ್ರೋಹ ಬಗೆಯುತ್ತಿದ್ದಾರೆ ಎನ್ನುವ ಮಾತು ಕೇಳಬರತೊಡಗಿದೆ.

(ದಟ್ಸ್ ಕನ್ನಡ ವಾರ್ತೆ)
ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+