ಅನಂತಕುಮಾರ್ ಗೆನಿಮ್ಮ ಮತ ನೀಡಿ : ಬಿಎಸ್ ವೈ

Ananthkumar has become the voice of Karnataka: BSY
ಬೆಂಗಳೂರು, ಏ. 20 : ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಕೋಟಿಗಟ್ಟಲೆ ಹಣ ಬಿಡುಗಡೆ ಮಾಡಿದೆ ಎಂಬ ಸುಳ್ಳು ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ಯುವರಾಜ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶಪಡಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಎಲ್ಲ ಮಾಜಿ ಮುಖ್ಯಮಂತ್ರಿಗಳನ್ನು ಜನರು ಮನೆಗೆ ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಭವಿಷ್ಯ ನುಡಿದರು.

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಪರವಾಗಿ ಪ್ರಚಾರ ಕಾರ್ಯ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು. ಕೇಂದ್ರದ ಸರ್ಕಾರವು ರಾಜ್ಯಕ್ಕೆ ಸರ್ಕಾರಕ್ಕೆ ನೀಡಿರುವ ಅನುದಾನದ ಅಂಕಿ ಅಂಶ ಸಹಿತ ಮಾಹಿತಿ ನೀಡುವ ಕೆಲಸವನ್ನು ರಾಹುಲ್ ಗಾಂಧಿ ಮಾಡಬೇಕು. ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದಂತೆ ಲೋಕಸಭೆ ಚುನಾವಣೆಯಲ್ಲಿಯೂ ಅದೇ ಪರಿಸ್ಥಿತಿ ಮುಂದುವರೆಲಿದೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿಗಳೆಲ್ಲಾ ಹೋಗಲಿದ್ದಾರೆ ಎಂದು ಟೀಕಿಸಿದರು. ಅನಂತಕುಮಾರ್ ಅವರನ್ನು ಅರಿಸಿ ತಂದರೆ ರಾಜ್ಯಕ್ಕೆ ಒಬ್ಬ ಕ್ಯಾಬಿನೆಟ್ ದರ್ಜೆಯ ಕೇಂದ್ರ ಮಂತ್ರಿಯನ್ನು ಆರಿಸಿದಂತಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+