ಅನಂತಕುಮಾರ್ ಗೆನಿಮ್ಮ ಮತ ನೀಡಿ : ಬಿಎಸ್ ವೈ

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಪರವಾಗಿ ಪ್ರಚಾರ ಕಾರ್ಯ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು. ಕೇಂದ್ರದ ಸರ್ಕಾರವು ರಾಜ್ಯಕ್ಕೆ ಸರ್ಕಾರಕ್ಕೆ ನೀಡಿರುವ ಅನುದಾನದ ಅಂಕಿ ಅಂಶ ಸಹಿತ ಮಾಹಿತಿ ನೀಡುವ ಕೆಲಸವನ್ನು ರಾಹುಲ್ ಗಾಂಧಿ ಮಾಡಬೇಕು. ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಳೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದಂತೆ ಲೋಕಸಭೆ ಚುನಾವಣೆಯಲ್ಲಿಯೂ ಅದೇ ಪರಿಸ್ಥಿತಿ ಮುಂದುವರೆಲಿದೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿಗಳೆಲ್ಲಾ ಹೋಗಲಿದ್ದಾರೆ ಎಂದು ಟೀಕಿಸಿದರು. ಅನಂತಕುಮಾರ್ ಅವರನ್ನು ಅರಿಸಿ ತಂದರೆ ರಾಜ್ಯಕ್ಕೆ ಒಬ್ಬ ಕ್ಯಾಬಿನೆಟ್ ದರ್ಜೆಯ ಕೇಂದ್ರ ಮಂತ್ರಿಯನ್ನು ಆರಿಸಿದಂತಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications