ಅಂಬೇಡ್ಕರ್ ಅವಮಾನ : ರಾಯಚೂರು ಉದ್ನಿಗ್ನ
ರಾಯಚೂರು, ಏ. 20 : ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಆರೋಪದ ಮೇಲೆ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಮನೋಹರ್ ಮಸ್ಕಿ ವಿರುದ್ದ ಸೋಮವಾರ ದಲಿತ ಸಂಘರ್ಷ ಸಮಿತಿ ರಾಯಚೂರು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಿತು. ಮಸ್ಕಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಡಿಎಸ್ಎಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಿನ್ನೆಲೆಯಲ್ಲಿ ಒಂದು ಬಸ್ ಸುಟ್ಟು ಹಾಕಲಾಗಿದೆ. ಅನೇಕ ವಾಹನಗಳು ಜಖಂಗೊಂಡಿದ್ದು, ಅಲ್ಲಲ್ಲಿ ಕಲ್ಲು ತೂರಾಟ ನಡೆದಿವೆ. ಮುಂಜಾಗ್ರತಾ ಕ್ರಮವಾಗಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಇತ್ತೀಚೆಗೆ ಯಾದಗಿರಿಯಲ್ಲಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಮನೋಹರ್ ಮಸ್ಕಿ, ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ. ಸಂವಿಧಾನ ರೂಪಿಸುವ ಕರಡು ಸಮಿತಿಗೆ ಅಧ್ಯಕ್ಷರಾಗಿದ್ದರು ಎಂಬ ಹೇಳಿಕೆ ನೀಡಿದ್ದರು. ಅದರಿಂದ ಆಕ್ರೋಶಗೊಂಡ ಡಿಎಸ್ಎಸ್ ಇಂದು ಪ್ರತಿಭಟನೆ ಹಾಗೂ ಬಂದ್ ಹಮ್ಮಿಕೊಂಡಿದೆ. ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮನೋಹರ ಮಸ್ಕಿ ವಿರುದ್ಧ ಘೋಷಣೆ ಕೂಗಿದ ಡಿಎಸ್ಎಸ್ ಅವರ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಪ್ರತಿಭಟನಾಕಾರ ಆಕ್ರೋಶಕ್ಕೆ ಬಸ್ ಸುಟ್ಟು ಭಸ್ಮವಾಗಿದ್ದು. ಅನೇಕ ವಾಹನಗಳು ಜಖಂಗೊಂಡಿವೆ. ಮನೋಹರ ಮಸ್ಕಿ ಅವರನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರ ಆಗ್ರಹಿಸಿದರು.
ಈ ಮಧ್ಯ ಸುರಪುರ ಪೊಲೀಸ್ ಠಾಣೆಗೆ ಶರಣಾದ ಮನೋಹರ್ ಮಸ್ಕಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಚಾರ ಸಭೆಯಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಮುಂಜಾಗ್ರತಾ ಕ್ರಮವಾಗಿ ರಾಯಚೂರಿನಲ್ಲಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications