ರಾಜೀವ ಹತ್ಯೆಯ ಹಂತಕರನ್ನು ಮರೆಯಲು ಸಾಧ್ಯವೇ
ಚೆನ್ನೈ, ಏ. 20 : ಭಾನುವಾರವಷ್ಟೇ ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಅವರನ್ನು ಕೊಂಡಾಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಇಂದು ಮಾತು ಬದಲಿಸಿದ್ದಾರೆ. ಮಾಜಿ ಪ್ರಧಾನಿಮಂತ್ರಿ ರಾಜೀವ ಗಾಂಧಿ ಹತ್ಯೆ ಹಿಂದೆ ಎಲ್ ಟಿಟಿಇ ಕೈವಾಡವಿರುವುದನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಪ್ರಭಾಕರನ್ ಕುರಿತು ಸಮರ್ಥಿಸಿಕೊಂಡು ನೀಡಿದ್ದ ಕರುಣಾನಿಧಿ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ಭುಗಿಲೇಳುವ ಸೂಚನೆ ಕಂಡು ಬಂದಿತ್ತು.
ಭಾನುವಾರ ಪ್ರಭಾಕರನ್ ಉಗ್ರಗಾಮಿ ಅಲ್ಲ ಎಂದಿದ್ದರು, ಸೋಮವಾರ ಎಲ್ ಟಿಟಿಇ ಉಗ್ರ ಸಂಘಟನೆ ಎಂದು ಹೇಳಿದ್ದಾರೆ. ಪ್ರಭಾಕರನ್ ಮೊದಮೊದಲು ಶ್ರೀಲಂಕಾದಲ್ಲಿರುವ ತಮಿಳರ ಹಕ್ಕಿಗಾಗಿ ಹೋರಾಟ ನಡೆಸಿದರು. ನಂತರ ದಿನಗಳಲ್ಲಿ ಅವರು ಬದಲಾದರು ಎಂದು ನಾನು ಹೇಳಿದ್ದೆ. ಆದರೆ, ಮಾಧ್ಯಮದವರು ತಪ್ಪಾಗಿ ಅರ್ಥೈಸಿ ಪ್ರಕಟಿಸಿದ್ದಾರೆ ಎಂದು ಮಾಧ್ಯಮದ ಮೇಲೆ ಗೂಬೆ ಕೂರಿಸಿದರು. ಲಂಕಾದಲ್ಲಿರುವ ತಮಿಳರ ಪರವಾಗಿ ಹೋರಾಟ ಮಾಡುತ್ತಿರುವುದನ್ನು ಗಮನದಲ್ಲಿರಿಸಿ ಹೇಳಿದ್ದೆ. ಆದರೆ, ರಾಜೀವ ಗಾಂದಿ ಹತ್ಯೆ ಮಾಡಿಲ್ಲ ಎಂದು ಹೇಳಿಯೇ ಇಲ್ಲ ಎಂದು ಕರುಣಾನಿಧಿ ಹೇಳಿದರು.
ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಮರೆಯಲಾರದ ಕೃತ್ಯವದು ಎಂದು ಸ್ಪಷ್ಟಪಡಿಸಿದ್ದಾರೆ. ಭಾನುವಾರ ಕರುಣಾನಿಧಿ ಅವರು ಪ್ರಭಾಕರನ್ ಅವರನ್ನು ಹಾಡಿಹೊಗಳಿದ್ದರು. ಪ್ರಭಾಕರನ್ ಉಗ್ರಗಾಮಿಯಲ್ಲ ಎಂದು ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಪಕ್ಷ ಅಸಮಾಧಾನ ವ್ಯಕ್ತಪಡಿಸಿತ್ತು.
(ದಟ್ಸ್ ಕನ್ನಡ ವಾರ್ತೆ)
ಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications