ನಟ ಕರಿಬಸವಯ್ಯ ಪುತ್ರಿ ಆತ್ಮಹತ್ಯೆ
ಬೆಂಗಳೂರು, ಏ. 21 : ಕನ್ನಡ ಚಿತ್ರರಂಗದ ಹಾಸ್ಯ ನಟ ಕೆ ಕರಿಬಸವಯ್ಯ ಅವರ ಪುತ್ರಿ ಸೋಮವಾರ ರಾತ್ರಿ ನೇಣಿಗೆ ಶರಣಾದ ದಾರುಣ ಘಟನೆ ಸೋಮವಾರ ರಾತ್ರಿ ನಗರದ ನಂದಿನಿ ಲೇಔಟ್ ನ ಜೇನುಕಲ್ಲು ಸಿದ್ದೇಶ್ವರ ಬಡಾವಣಿಯಲ್ಲಿ ನಡೆದಿದೆ.
ಕೆ ರಾಧಾ ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ವರ್ಷಗಳ ಹಿಂದೆ ರಾಧಾ ಅವರು ಮಹೇಶ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮಹೇಶ್ ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ. ರಾಧಾ ಅವರು ಕೇಂದ್ರ ಸರ್ಕಾರದ ನೌಕರಿ ಮಾಡುತ್ತಿದ್ದರು. ಇತ್ತೀಚೆಗೆ ಗಂಡ ಹೆಂಡತಿ ಮಧ್ಯೆ ಜಗಳ ನಡೆಯುತ್ತಿತ್ತು. ಗಂಡ ಮಹೇಶ್ ಹಣಕ್ಕಾಗಿ ಪೀಡಿಸುತ್ತಿದ್ದ ಎಂದು ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮಹೇಶ್ ನನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications